ಮಂಡ್ಯ-ಮೈಸೂರು ಭಾಗಕ್ಕೆ ಕುಮಾರಸ್ವಾಮಿ ಕೊಡುಗೆ ಏನೂ ಇಲ್ಲ: ಡಿಕೆ ಶಿವಕುಮಾರ್

Prasthutha|

ಮೈಸೂರು: ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಕುಮಾರಸ್ವಾಮಿ ಕೊಡುಗೆ ಏನು ಇಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ‌.

- Advertisement -

2018ರಲ್ಲಿ ಕಾಂಗ್ರೆಸ್ ಪಕ್ಷ ಅವರನ್ನು ಮುಖ್ಯಮಂತ್ರಿ ಮಾಡಿದ್ದಾಗ ಎರಡು ಜಿಲ್ಲೆಗಳಿಂದ ಮೂರು ಎಂಎಲ್ ಸಿ, ಮೂರು ಶಾಸಕರ ಜೊತೆಗೆ ಡಿಸಿ ತಮ್ಮಣ್ಣ, ಪುಟ್ಟರಾಜು ಮತ್ತು ಸಾರಾ ಮಹೇಶ್-ಮಂತ್ರಿಗಳಿದ್ದರು. ಆದರೆ, ಅಷ್ಟಾಗಿಯೂ ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಿಗೆ ಕುಮಾರಸ್ವಾಮಿ ಏನನ್ನೂ ನೀಡಲಿಲ್ಲ ಎಂದರು.

ಈ ಭಾಗದ ಜನ ಎಸ್ ಎಂ ಕೃಷ್ಣ, ಶಂಕರೇಗೌಡ, ಮಾದೇಗೌಡ, ದೇವರಾಜ ಅರಸು ಮತ್ತು ಸಿದ್ದರಾಮಯ್ಯರನ್ನು ನೆನಪಿಸಿಕೊಳ್ಳುತ್ತಾರೆ. ಅದರೆ ಕಾಂಗ್ರೆಸ್ ನೆರವಿನಿಂದ ಪ್ರಧಾನಿಯಾದ ದೇವೇಗೌಡರಾಗಲೀ, ಎರಡೆರಡು ಬಾರಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯಾಗಲಿ ಒಂದೇ ಒಂದು ನೀರಾವರಿ ಯೋಜನೆ ಬೇರೆ ಯಾವುದೇ ಕಾರ್ಯಕ್ರಮ ಜನರಿಗೆ ನೀಡಲಿಲ್ಲ, ಹಾಗಾಗಿ ಜನರು ಅವರನ್ನು ನೆನಪಿಸಿಕೊಳ್ಳಲ್ಲ ಎಂದು ಶಿವಕುಮಾರ್ ಹೇಳಿದರು.

Join Whatsapp