ಮಾತನಾಡಲು ವಿಷಯವಿಲ್ಲದೆ ಕುಮಾರಸ್ವಾಮಿಗೆ ಪೂರ್ತಿ ಹುಚ್ಚು ಹಿಡಿದಿದೆ: ಬೋಸರಾಜು

Prasthutha|

ರಾಯಚೂರು: ಹೆಚ್‌ ಡಿ ಕುಮಾರಸ್ವಾಮಿಗೆ ಮಾತನಾಡಲು ವಿಷಯವಿಲ್ಲದೆ ಪೂರ್ತಿ ಹುಚ್ಚು ಹಿಡಿದಿದೆ. ಸುಮ್ಮನೆ ಒದರುತ್ತಿದ್ದಾರೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ವಾಗ್ದಾಳಿ ನಡೆಸಿದರು.

- Advertisement -


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ವಿಚಾರದಲ್ಲಿ ಮನನೊಂದು ಆತ್ಮಸಾಕ್ಷಿಯಾಗಿ ನಡೆದುಕೊಳ್ಳುತ್ತೇನೆ ಎಂದು ಪಾರ್ವತಿ ಸಿದ್ದರಾಮಯ್ಯ 14 ಸೈಟ್‌ ಗಳನ್ನ ಮರಳಿಸಿದ್ದಾರೆ. ಸೈಟ್ ವಾಪಸ್ ನೀಡಿದ ಮೇಲೆ ಕುಮಾರಸ್ವಾಮಿಗೆ ಮಾತನಾಡಲು ವಿಷಯವಿಲ್ಲ. ಅದಕ್ಕೆ ಹುಚ್ಚು ಹಿಡಿದವರ ಹಾಗೇ ಒದರಾಡುತ್ತಿದ್ದಾರೆ ಎಂದರು.

ಮುಡಾ ಪ್ರಕರಣದಲ್ಲಿ ನನ್ನ ಪತಿ ಹೆಸರಿಗೆ ಮಸಿ ಬಳಿಯುವಂತಹ ಕೆಲಸ ಮಾಡುತ್ತಿದ್ದಾರೆ. ನನ್ನ ಹೆಸರಿನಲ್ಲಿರುವ 14 ಸೈಟ್‌ ಗಳನ್ನ ವಾಪಸ್ ಕೊಡುತ್ತೇನೆ ಎಂದು ಪಾರ್ವತಿ ಸಿದ್ದರಾಮಯ್ಯ ಹೇಳಿದ್ದಾರೆ. ಮನನೊಂದು ಆತ್ಮಸಾಕ್ಷಿಯಾಗಿ ನಡೆದುಕೊಳ್ಳುತ್ತೇನೆ ಎಂದು ಸೈಟ್ ಸರೆಂಡರ್ ಮಾಡಿದ್ದಾರೆ. ಇದಕ್ಕೆ ಹೇಗೆ ಸರೆಂಡರ್ ಮಾಡಿದರೂ ಎಂದು ಕುಮಾರಸ್ವಾಮಿ ಕೇಳ್ತಾರೆ. ಅಶೋಕನನ್ನು ಕೇಳಿದರೆ ನಾನು ಆವಾಗಲೇ ಜಾಗವನ್ನು ಮರಳಿಸಿದ್ದೇನೆ ಎನ್ನುತ್ತಾರೆ. ಅವರು ವಿರೋಧ ಪಕ್ಷದ ನಾಯಕರು ಇವರು ಕೇಂದ್ರ ಸಚಿವರು. ಇವರಿಗೆ ಯಾವ ರೀತಿಯ ಬದ್ಧತೆಯಿದೆ. ಜವಾಬ್ದಾರಿಯಿದೆ. ಇವರ ಮಾತುಗಳಿಗೆ ಅರ್ಥವಿದೆಯಾ? ಹುಚ್ಚರು ಮಾಡಿದ ಹಾಗೇ ಮಾಡಿ ಏನೇನೋ ಒದರಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದರು.



Join Whatsapp