ಕುಮಾರಸ್ವಾಮಿಯೇ ನಾಗಮಂಗಲ ಗಲಾಟೆ ಮಾಡಿಸಿರಬಹುದು: ಡಿಕೆ ಸುರೇಶ್

Prasthutha|

ಬೆಂಗಳೂರು: ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಯೇ ನಾಗಮಂಗಲ ಗಲಾಟೆ ಮಾಡಿಸಿರಬಹುದು. ಪ್ರತಿ ವಾರ ಇಲ್ಲಿಗೆ ಬರುತ್ತಾರಲ್ಲ, ಹಾಗೆ ಗಲಾಟೆ ಮಾಡಿಸಿರಬಹುದು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಸ್ಲಿಮನಾಗಿ ಹುಟ್ಟಬೇಕು ಅಂತಾ ಹೇಳುತ್ತಿದ್ದವನು ನಾನಲ್ಲ. ಹೆಚ್. ಡಿ.ಕುಮಾರಸ್ವಾಮಿ ನಿತ್ಯ ಒಂದೊಂದು ಹೇಳಿಕೆ ಕೊಡುತ್ತಾರೆ. ಹಿಂದೆ ಗಲಭೆಗಳಾದಾಗ ಅಮಿತ್ ಶಾ, ಪ್ರಧಾನಿ ಮೋದಿ ವಿರುದ್ಧ ಕುಮಾರಸ್ವಾಮಿ ಹೇಳಿಕೆ ಕೊಟ್ಟಿದ್ದರು ಎಂದು ತಿಳಿಸಿದರು.


ಜೆಪಿ ಶಾಸಕ ಮುನಿರತ್ನ ಅವರು ದಲಿತ ಸಮುದಾಯಕ್ಕೆ ಕೀಳು ಪದಗಳಿಂದ ಸಂಬೋಧನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಸುಮೋಟೋ ಕೇಸ್ ದಾಖಲಿಸಬೇಕು. ಎರಡು ಜಾತಿಗಳನ್ನು ಎತ್ತಿಕಟ್ಟುವ ಕೆಲಸ ಆಗಿದೆ ಎಂದರು.

- Advertisement -


ಇದನ್ನು ಬಿಜೆಪಿ ನಾಯಕರು ಯಾವ ರೀತಿ ಅರಗಿಸಿಕೊಳ್ಳುತ್ತಿದ್ದಾರೆ? ಬಿಜೆಪಿಯ ಒಬ್ಬೇ ಒಬ್ಬರು ನಾಯಕರು ಇದುವರೆಗೂ ಹೇಳಿಕೆ ನೀಡಿಲ್ಲ. ಬಿಜೆಪಿಯವರಿಗೆ ನೈತಿಕತೆ ಇದ್ರೆ ಮುನಿರತ್ನ ಅವರನ್ನು ಇಷ್ಟೊತ್ತಿಗಾಗಲೇ ಪಕ್ಷದಿಂದ ವಜಾ ಮಾಡಬೇಕಿತ್ತು ಎಂದಿದ್ದಾರೆ.



Join Whatsapp