‘ಬಿಜೆಪಿಯಿಂದ ಆಯ್ಕೆಯಾದರೂ ಬೊಮ್ಮಾಯಿ ಜನತಾದಳದ ಮುಖ್ಯಮಂತ್ರಿ’: ಕುಮಾರಸ್ವಾಮಿ

Prasthutha|

ಬೆಂಗಳೂರು: ಬಿಜೆಪಿಯಿಂದ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದರೂ ಜನತಾದಳದವರೇ ಮುಖ್ಯಮಂತ್ರಿ ಆಗಿದ್ದಾರೆ ಎಂಬ ಭಾವನೆ ನಮಗೆ ಇದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಸವರಾಜ ಬೊಮ್ಮಾಯಿ ನಮಗೆ ಸ್ನೇಹಿತರು, ಒಳ್ಳೆಯ ಹಿತೈಷಿಗಳು. ಅವರು ಉತ್ತಮವಾಗಿ ಕೆಲಸ ಮಾಡಲಿ. ಯಡಿಯೂರಪ್ಪನವರಿಗೆ ಮಾಡಿದ ರೀತಿ ಬೊಮ್ಮಾಯಿ ಅವರಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡದಿರಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಸರ್ಕಾರ ಬಸವರಾಜ ಬೊಮ್ಮಾಯಿ ಅವರಿಗೆ ಸರಿಯಾದ ಸಹಕಾರ, ಅನುದಾನವನ್ನು ನೀಡಬೇಕು. ರಾಜ್ಯದ ಬೇಡಿಕೆ, ಇಲಾಖೆಯ ಹಣ, GST ಹಣ ಸರಿಯಾಗಿ ನೀಡಿ ಸಹಕಾರ ನೀಡಬೇಕು ಎಂದು ಈ ವೇಳೆ ಹೇಳಿದ್ದಾರೆ.

Join Whatsapp