ಕುಮಾರಸ್ವಾಮಿ ಮಾತಾಡುವಾಗ ನಾಲಿಗೆ ಮೇಲೆ ಹಿಡಿತ ಹೊಂದಿರಬೇಕು: ಶಿವಲಿಂಗೇಗೌಡ

Prasthutha|

ಹಾಸನ: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮನಬಂದಂತೆ ನಾಲಗೆ ಹರಿಬಿಡುತ್ತಿದ್ದಾರೆ. ಸರ್ಕಾರದಲ್ಲಿ ಉನ್ನತ ಸ್ಥಾನಗಳಲ್ಲಿರುವವರ ಬಗ್ಗೆ ಕೇವಲವಾಗಿ ಮತ್ತು ಅವಹೇಳನಕಾರಯಾಗಿ ಮಾತಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದ್ದಾರೆ.

- Advertisement -

ನಗರದ ಪ್ರೆಸ್ ಕ್ಲಬ್ ನಲ್ಲಿ ಮಾಧ್ಯಮ ಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಮತ್ತು ಹೆಚ್ ಡಿ ರೇವಣ್ಣ ಬಂಧನ ಪ್ರಕರಣಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಪೆನ್ ಡ್ರೈವ್ ಗಳು ಸಾರ್ವಜನಿಕಗೊಂಡಿದ್ದಕ್ಕೆ ಸರ್ಕಾರವನ್ನು ದೂರುತ್ತಿದ್ದಾರೆ, ಇದಕ್ಕೆ ಸರ್ಕಾರ ಹೇಗೆ ಕಾರಣವಾಗುತ್ತದೆ ಎಂದು ಪ್ರಶ್ನಿಸಿದರು.


ಪೆನ್ ಡ್ರೈವ್ ಗಳ ವಿಷಯ 4-5 ತಿಂಗಳುಗಳಿಂದ ಹರಿದಾಡುತಿತ್ತು, ಅದರೆ ಅವುಗಳನ್ನು ಸಾರ್ವಜನಿಕಗೊಳಿಸದಂತೆ ನ್ಯಾಯಲಯದಿಂದ ತಡೆಯಾಜ್ಞೆ ತಂದಿದ್ದ ಕಾರಣ ಅವು ಬೆಳಕಿಗೆ ಬಂದಿರಲಿಲ್ಲ ಎಂದು ಹೇಳಿದರು.

Join Whatsapp