ಉಡುಗೊರೆಯಾಗಿ HMT ವಾಚ್ ನೀಡಿ: ರಾಜ್ಯದ ಸಂಸದರಿಗೆ ಕುಮಾರಸ್ವಾಮಿ ಕರೆ

Prasthutha|

ಬೆಂಗಳೂರು: ಹೆಚ್ ಎಮ್ ಟಿ ಕಂಪನಿ ಪುನಶ್ಚೇತಕ್ಕೆ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ ಡಿ ಕುಮಾರಸ್ವಾಮಿ ಟೊಂಕ ಕಟ್ಟಿ ನಿಂತಿದ್ದಾರೆ.

- Advertisement -


ಈ ನಿಟ್ಟಿನಲ್ಲಿ ಹೆಚ್ ಎಮ್ ಟಿ ವಾಚ್ ನ್ನು ಉಡುಗೊರೆಯಾಗಿ ನೀಡುವಂತೆ ಕುಮಾರಸ್ವಾಮಿ ಕರೆ ಕೊಟ್ಟಿದ್ದಾರೆ.


ಉಡುಗೊರೆಯಾಗಿ ನೀಡಲು ಹೆಚ್ ಎಮ್ ಟಿ ವಾಚ್ ಅನ್ನೇ ಆಯ್ಕೆ ಮಾಡಿ ಎಂದು ಹೆಚ್ ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಸಂಸದರಿಗೆ ಕರೆಕೊಟ್ಟಿದ್ದಾರೆ.

- Advertisement -


ಗೌರಿ ಗಣೇಶ ಹಬ್ಬದ ಪ್ರಯುಕ್ತ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಎಚ್ಎಂಟಿ ವಾಚ್ ಉಡುಗೊರೆಯಾಗಿ ನೀಡಿದ್ದರು.


ಈ ಕುರಿತು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ, “HMT ಕೈಗಡಿಯಾರ ಒಂದು ಕಾಲದಲ್ಲಿ ಭಾರತದ ಹೃದಯ ಬಡಿತವಾಗಿತ್ತು. ಎಲ್ಲರ ಪಾಲಿಗೂ ಅದು ನಿತ್ಯನಾಡಿಯಾಗಿತ್ತು. ನಮ್ಮ ತಲೆಮಾರಿನ ಯುವಜನರಿಗೆ HMT ವಾಚ್ ಎಂದರೆ ಅದೊಂದು ದಂತಕಥೆ. ನನ್ನ ತಂದೆ, ಹೆಚ್.ಡಿ.ಕುಮಾರಸ್ವಾಮಿ ಅವರು ಗೌರಿಹಬ್ಬದ ದಿನದಂದು HMT ಕೈಗಡಿಯಾರ ಖರೀದಿಸಿ ನನ್ನ ಕೈಗೆ ಕಟ್ಟಿದರು” ಯುವ ಜನರು ನಮ್ಮ ನಾಡಿನ ಹೆಮ್ಮೆಯ ಪ್ರತೀಕವಾದ HMT ಕೈಗಡಿಯಾರಗಳನ್ನೇ ಕಟ್ಟಬೇಕು ಎಂಬುದು ನನ್ನ ವಿನಂತಿ. ನಾನು HMT ಕೈಗಡಿಯಾರ ಕಟ್ಟಿದ್ದೇನೆ, ನೀವೂ ಕಟ್ಟಿ”. ಎಂದು ಹೇಳಿದ್ದಾರೆ.


ವಾಚ್ ಅಂದ್ರೆ ಹೆಚ್ ಎಮ್ ಟಿ ಅಂತ ತಟ್ಟನೆ ಹೇಳುವ ಕಾಲವಿತ್ತು. ಹೆಚ್ ಎಮ್ ಟಿ ವಾಚ್ ಕಟ್ಟಿಕೊಂಡರೆ ಆತ ಶ್ರೀಮಂತ ಎಂಬ ಭಾವನೆ ಮೂಡುತ್ತಿತ್ತು. ಹಿಂದೂಸ್ತಾನ್ ಮೆಷಿನ್ ಟೂಲ್ಸ್ ಕಂಪನಿ ಈಗ ಅಳಿವಿನ ಅಂಚಿನಲ್ಲಿದೆ. ಕಂಪನಿ ಪುನಶ್ಚೇತಕ್ಕೆ ಕುಮಾರಸ್ವಾಮಿ ಪ್ರಯತ್ನ ಮಾಡುತ್ತಿದ್ದಾರೆ.



Join Whatsapp