Home ಕರಾವಳಿ ಕುಂದಾಪುರ| ಖಾಸಗಿ ಆಸ್ಪತ್ರೆಯ ಮಾಲಕ ಸ್ವಯಂ ಗುಂಡಿಕ್ಕಿ ಆತ್ಮಹತ್ಯೆ

ಕುಂದಾಪುರ| ಖಾಸಗಿ ಆಸ್ಪತ್ರೆಯ ಮಾಲಕ ಸ್ವಯಂ ಗುಂಡಿಕ್ಕಿ ಆತ್ಮಹತ್ಯೆ

ಉಡುಪಿ: ಕುಂದಾಪುರ ಖಾಸಗಿ ಆಸ್ಪತ್ರೆಯೊಂದರ ಮಾಲಕರೋರ್ವರು ತಮ್ಮ ಮನೆಯ ಸಮೀಪ ಸ್ವಯಂ ಗುಂಡಿಕ್ಕಿ ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಕುಂದಾಪುರ ಚಿನ್ಮಯಿ ಆಸ್ಪತ್ರೆಯ ಮಾಲಕ ಕಟ್ಟೆ ಭೋಜಣ್ಣ ಶೆಟ್ಟಿ (78) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕುಂದಾಪುರದ ಈ ಆಸ್ಪತ್ರೆ ಉಡುಪಿ ಹಾಗೂ ಉ.ಕ ಜಿಲ್ಲೆಯಲ್ಲಿ ಹೆಸರುವಾಸಿಯಾಗಿದೆ.

ಇಂದು ಬೆಳಿಗ್ಗೆ6.40 ಸುಮಾರಿಗೆ ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬವರ ಮನೆಯ ಸಿಟೌಟ್ ನಲ್ಲಿ ತಮ್ಮ ರಿವಾಲ್ವರ್ ನಿಂದ ಗುಂಡು ಹಾರಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಕಟ್ಟೆ ಭೋಜಣ್ಣ ಬೆಂಗಳೂರಿನಲ್ಲಿ ಹಲವಾರು ಹೋಟೆಲ್, ಬಟ್ಟೆ ಅಂಗಡಿಗಳನ್ನು ನಡೆಸುತ್ತಿದ್ದರು.

ಭೂಮಿ ಹಾಗೂ ಹಣಕಾಸಿನ ವ್ಯವಹಾರವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ, ಪೊಲೀಸ್ ಠಾಣೆಯ ಠಾಣಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp
Exit mobile version