ನಾಲ್ವರು ರೈತರ ಸಾವಿಗೆ ಕಾರಣವಾದ ಲಖಿಂಪುರ ಖೇರಿ ಪ್ರಕರಣ ವಿಚಾರಣೆಗೆ 5 ವರ್ಷ ಬೇಕೆಂದ ನ್ಯಾಯಾಧೀಶರು

Prasthutha|

ನವದೆಹಲಿ: 2021ರಲ್ಲಿ ನಡೆದ ನಾಲ್ವರು ರೈತರ ಸಾವಿಗೆ ಕಾರಣವಾದ ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಐದು ವರ್ಷ ಬೇಕಾಗಲಿವೆ ಎಂದು ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರು, ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

- Advertisement -

ಪ್ರಕರಣದ ಪ್ರಮುಖ ಆರೋಪಿ ಆಶೀಶ್ ಮಿಶ್ರಾ ಜಾಮೀನು ಕೋರಿರುವ ಹಿನ್ನೆಲೆಯಲ್ಲಿ, ಈ ಪ್ರಕರಣಕ್ಕೆ ಸಂಬಂಧಿತ ಇತರ ಆರೋಪಿಗಳು ಇನ್ನೂ ಬಂಧನದಲ್ಲಿದ್ದಾರೆಯೇ ಎನ್ನುವ ಮಾಹಿತಿ ನೀಡುವಂತೆ ಸುಪ್ರೀಂ ಕೋರ್ಟ್‌, ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಕೇಂದ್ರ ಬಿಜೆಪಿ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಮತ್ತು ಇತರ 12 ಮಂದಿ 2021ರ ಅಕ್ಟೋಬರ್‌ನಲ್ಲಿ ಪ್ರತಿಭಟನನಿರತ ರೈತರ ಮೇಲೆ ಕಾರು ಹರಿಸಿ, ನಾಲ್ವರು ರೈತರನ್ನು ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಆಶೀಶ್‌ ಜಾಮೀನು ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಮತ್ತು ವಿ. ರಾಮಸುಬ್ರಮಣಿಯನ್‌ ಅವರಿದ್ದ ಪೀಠವು, ವಿಚಾರಣೆ ಪೂರ್ಣಗೊಳಿಸಲು ಐದು ವರ್ಷಗಳು ಬೇಕಾಗಲಿವೆ ಎಂದು ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರು ನೀಡಿರುವ ಮಾಹಿತಿ ಗಮನಿಸಿತು. ಮುಂದಿನ ವಿಚಾರಣೆಯನ್ನು ಜನವರಿ 19ಕ್ಕೆ ನಿಗದಿಪಡಿಸಿತು.

Join Whatsapp