ಲಖಿಂಪುರ ಖೇರಿ ಹಿಂಸಾಚಾರ: ಪತ್ರಕರ್ತರೊಂದಿಗೆ ಅನುಚಿತವಾಗಿ ವರ್ತಿಸಿದ ಕೇಂದ್ರ ಸಚಿವ

Prasthutha|

ಲಕ್ನೋ: ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ, ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾಧ್ಯಮದವರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಪತ್ರಕರ್ತರು ಆರೋಪಿಸಿದ್ದಾರೆ

- Advertisement -

ಮಕ್ಕಳ ಆರೈಕೆ ಕೇಂದ್ರದಲ್ಲಿ ಆಮ್ಲಜನಕ ಘಟಕದ ಉದ್ಘಾಟನೆಗೆ ಆಗಮಿಸಿದ್ದ ಸಚಿವ ಅಜಯ್ ಮಿಶ್ರಾ, ಲಖಿಂಪುರ ಘಟನೆಗೆ ಸಂಬಂಧಿಸಿದಂತೆ ಎಸ್.ಐ.ಟಿ ಆರೋಪದ ಕುರಿತು ಪತ್ರಕರ್ತರ ಪ್ರಶ್ನೆಗೆ ಕೋಪಗೊಂಡು ಅವ್ಯಾಚ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ದೂರಲಾಗಿದೆ.

ಮಾತ್ರವಲ್ಲ ಘಟನೆಯನ್ನು ಚಿತ್ರೀಕರಿಸುತ್ತಿದ್ದ ಪತ್ರಕರ್ತನ ಮೊಬೈಲ್ ಕಿತ್ತುಕೊಂಡು ದರ್ಪ ಪ್ರದರ್ಶಿಸಿದ್ದಾರೆ.

Join Whatsapp