Home ಟಾಪ್ ಸುದ್ದಿಗಳು ಲಖಿಂಪುರ ಹಿಂಸಾಚಾರ । ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಗೆ ಜಾಮೀನು ಮಂಜೂರು

ಲಖಿಂಪುರ ಹಿಂಸಾಚಾರ । ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಗೆ ಜಾಮೀನು ಮಂಜೂರು

ನವದೆಹಲಿ: ಲಖಿಂಪುರದಲ್ಲಿ ನಡೆದ ರೈತರ ಕೊಲೆ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಹಾಯಕ ಖಾತೆ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಎಂಬಾತನು ಪ್ರಮುಖ ಆರೋಪಿಯಾಗಿದ್ದು, ಅಲಹಾಬಾದ್ ಹೈಕೋರ್ಟ್ ನ ಲಕ್ನೋ ಪೀಠ ಜಾಮೀನು ಮಂಜೂರು ಮಾಡಿದೆ.

ಈ ಘಟನೆಯ ಕುರಿತು ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (ಎಸ್.ಐ.ಟಿ) ಆಶಿಶ್ ಮಿಶ್ರಾನನ್ನು ಕಳೆದ ವರ್ಷ ಅಕ್ಟೋಬರ್ 9 ರಂದು ಬಂಧಿಸಿತ್ತು.

ಅಶಿಶ್ ಮಿಶ್ರಾ ವಿಚಾರಣೆಗೆ ಸಹಕರಿಸದೆ ಕೆಲವು ಸಂಶಯಗಳಿಗೆ ಸಮರ್ಪಕ ಉತ್ತರಿಸದ ಕಾರಣ ಅವನನ್ನು ಬಂಧಿಸಲಾಗಿದೆ ಎಂದು ಡಿಜಿಪಿ ಉಪೇಂದ್ರ ಅಗರ್ವಾಲ್ ಸುದ್ದಿಗಾರರಿಗೆ ತಿಳಿಸಿದ್ದರು

Join Whatsapp
Exit mobile version