Home ಟಾಪ್ ಸುದ್ದಿಗಳು ಲಖಿಂಪುರ್ ಹಿಂಸಾಚಾರ| ಆಶಿಶ್ ಮಿಶ್ರಾ ಮೂರು ದಿನಗಳ ಪೊಲೀಸ್ ಕಸ್ಟಡಿಗೆ

ಲಖಿಂಪುರ್ ಹಿಂಸಾಚಾರ| ಆಶಿಶ್ ಮಿಶ್ರಾ ಮೂರು ದಿನಗಳ ಪೊಲೀಸ್ ಕಸ್ಟಡಿಗೆ

ಲಖ್ನೋ: ಲಖಿಂಪುರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆಶಿಶ್ ಮಿಶ್ರಾ ನನ್ನು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ನನ್ನು ಕನಿಷ್ಠ ಒಂದು ವಾರದವರೆಗೆ ಕಸ್ಟಡಿಗೆ ನೀಡಬೇಕು ಎಂದು ತನಿಖಾ ತಂಡ ಕೇಳಿಕೊಂಡಾಗ ಲಖಿಂಪುರ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಮೂರು ದಿವಸಗಳ ಪೊಲೀಸ್ ಕಸ್ಟಡಿಗೆ ನೀಡಿದೆ. ಈ ಮೊದಲು ತನಿಖಾ ತಂಡವು ಆಶಿಶ್ ಮಿಶ್ರಾ ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಆರೋಪಿಸಿತ್ತು.

ಆಶಿಶ್ ನನ್ನು 11 ಗಂಟೆಗಳ ಸುದೀರ್ಘ ವಿಚಾರಣೆಯ ನಂತರ ಉತ್ತರಪ್ರದೇಶ ಪೊಲೀಸರು ಬಂಧಿಸಿದ್ದರು.

ಲಖಿಂಪುರ ಖೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಒಬ್ಬ ರೈತ ಸೇರಿದಂತೆ ಒಂಬತ್ತು ಮಂದಿಯ ಸಾವಿಗೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಕಾರಣನಾಗಿದ್ದನು.

Join Whatsapp
Exit mobile version