ಲಖಿಂಪುರ ಹಿಂಸಾಚಾರ ಪ್ರಕರಣ : ಆಶಿಶ್ ಮಿಶ್ರಾ ಗೆ 14 ದಿನಗಳ ನ್ಯಾಯಾಂಗ ಬಂಧನ

Prasthutha|

ಲಕ್ನೋ: ಲಖಿಂಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ನನ್ನು ಶನಿವಾರ ತಡರಾತ್ರಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಸ್ತುತ ಆತನನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

ಲಖಿಂಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಮಾರು 12 ಗಂಟೆಗಳ ವಿಚಾರಣೆಯ ಬಳಿಕ ವೈದ್ಯಕೀಯ ತಂಡ ಪರೀಕ್ಷಿಸಿದ ನಂತರ ಆಶಿಶ್ ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು.

ಈ ಮಧ್ಯೆ ಆರೋಪಿ ಆಶಿಶ್ ನನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಬೇಕೆಂದು ಸಲ್ಲಿಸಿದ ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಅವರು ಸೋಮವಾರ ವಿಚಾರಣೆ ನಡೆಸಲಿದ್ದಾರೆ.

- Advertisement -

ಕಳೆದ ವಾರ ಉತ್ತರಪ್ರದೇಶದ ಲಖಿಂಪುರದಲ್ಲಿ ನಾಲ್ವರು ರೈತರು ಸೇರಿದಂತೆ 8 ಮಂದಿಯ ಹತ್ಯೆಗೆ ಕಾರಣವಾದ ಪ್ರಕರಣದಲ್ಲಿ ಆಶಿಶ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಸಾಕಷ್ಟು ವಿವಾದಕ್ಕೆ ಸಾಕ್ಷಿಯಾಗಿದ್ದ ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಆಶಿಶ್ ಬಂಧನಕ್ಕೆ ರೈತ ಮುಖಂಡರು ಮತ್ತು ವಿರೋಧ ಪಕ್ಷಗಳು ಒತ್ತಾಯಿಸಿದ್ದವು.

Join Whatsapp