ಲಕ್ಷದ್ವೀಪ ಉಳಿಸಿ ಅಭಿಯಾನ : 93 ನಿವೃತ್ತ ಅಧಿಕಾರಿಗಳಿಂದ ಪ್ರಧಾನಿಗೆ ಪತ್ರ

Prasthutha|

ಕೊಚ್ಚಿ : ಲಕ್ಷದ್ವೀಪ ಆಡಳಿತಾಧಿಕಾರಿ ಪ್ರಫುಲ್‌ ಪಟೇಲ್‌ ವಿವಾದಾತ್ಮಕ ನಿರ್ಧಾರಗಳ ವಿರುದ್ಧ ದೇಶದ ಹಿರಿಯ ನಿವೃತ್ತ ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಸುಮಾರು 93 ಹಿರಿಯ ನಿವೃತ್ತ ಅಧಿಕಾರಿಗಳು ಈ ಪತ್ರಕ್ಕೆ ಸಹಿ ಮಾಡಿದ್ದಾರೆ.

- Advertisement -

ಕೇಂದ್ರಾಡಳಿತ ಪ್ರದೇಶದಲ್ಲಿ ಅಭಿವೃದ್ಧಿ ಹೆಸರಿನಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಗಳ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ಲಕ್ಷದ್ವೀಪ ಪ್ರಜೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಹೊಸ ನಿಯಮಗಳನ್ನು ರೂಪಿಸಲಾಗುತ್ತದೆ.

ಪ್ರಫುಲ್‌ ಪಟೇಲ್‌ ತೆಗೆದುಕೊಳ್ಳುತ್ತಿರುವ ನಿರ್ಧಾರಗಳು ಜನರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜನರಿಗೆ ಸ್ಪಂದಿಸುವ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಮನವಿ ಮಾಡಿದ್ದಾರೆ. ಇನ್ನೊಂದೆಡೆ ಪ್ರಫುಲ್‌ ಪಟೇಲ್‌ ವಿರುದ್ಧ, ಲಕ್ಷದ್ವೀಪ ಉಳಿಸಿ ಅಭಿಯಾನ ಆರಂಭವಾಗಿದೆ.

Join Whatsapp