Home ಟಾಪ್ ಸುದ್ದಿಗಳು ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ ನೇಮಕ

ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ ಸವದಿ ನೇಮಕ

ಬೆಂಗಳೂರು: ಬಿಜೆಪಿಯ ವಿವಿಧ ಜವಾಬ್ದಾರಿಗಳಿಗೆ ಹೊಸ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್  ಭಾನುವಾರ ಆದೇಶ ಹೊರಡಿಸಿದ್ದಾರೆ.

ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನ ಕಳೆದುಕೊಳ್ಳುವಾಗ  ಉಪಮುಖ್ಯಮಂತ್ರಿ ಸ್ಥಾನ ಕಳೆದುಕೊಂಡಿದ್ದ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿರವರಿಗೆ ಮಹತ್ವದ ಸ್ಥಾನ ನೀಡಲಾಗಿದೆ. ಇನ್ನು ಮುಂದೆ ಲಕ್ಷ್ಮಣ ಸವದಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಅಧಿಕಾರ ಹೊಂದಲಿದ್ದಾರೆ. ಈ ಹಿಂದೆ ಸವದಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಸಹ  ಉಪಮುಖ್ಯಮಂತ್ರಿಯಾಗಿದ್ದರು. ಬದಲಾದ ರಾಜಕೀಯ ವಿದ್ಯಮಾನಗಳಿಂದ ಅವರು ಆ   ಹುದ್ದೆ ಕಳೆದುಕೊಂಡಿದ್ದ ಅವರು ಇದೀಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷ ಸ್ಥಾನ ಸಿಕ್ಕಿದೆ.

ಪಕ್ಷದ ಮುಖ್ಯ ವಕ್ತಾರರಾಗಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್  ಅನಿವಾಸಿ ಭಾರತೀಯ ವಿಭಾದ ಸಂಚಾಲಕರನ್ನಾಗಿ ನೇಮಕವಾಗಿದ್ದಾರೆ.ರಾಜ್ಯ ಬಿಜೆಪಿ ಮುಖ್ಯ ವಕ್ತಾರರ ಸ್ಥಾನಕ್ಕೆ ಮೈಸೂರಿನ ಎಂ.ಜಿ ಮಹೇಶ್ ಅವರನ್ನು ನೇಮಿಸಲಾಗಿದೆ.

ಇನ್ನು ಹಲವು ನೇಮಕಗಳೂ ನಡೆದಿವೆ.

Join Whatsapp
Exit mobile version