Home ಟಾಪ್ ಸುದ್ದಿಗಳು ಭೂಮಿ ಹಗರಣ ಆರೋಪ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ಭೂಮಿ ಹಗರಣ ಆರೋಪ: ಲಾಲು, ಪುತ್ರರಿಗೆ ಜಾಮೀನು ನೀಡಿದ ದೆಹಲಿ ಕೋರ್ಟ್

ನವದೆಹಲಿ: ಆರ್ ಜೆಡಿ ಪಕ್ಷದ ಮುಖ್ಯಸ್ಥ ಲಾಲು ಪ್ರಸಾದ್ ಹಾಗೂ ಅವರ ಮಕ್ಕಳಾದ ತೇಜಸ್ವಿ ಯಾದವ್, ತೇಜ್ ಪ್ರತಾಪ್ ಯಾದವ್ ಅವರಿಗೆ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ಜಾಮೀನು ನೀಡಿದೆ.


ರೈಲ್ವೆ ಇಲಾಖೆಯಲ್ಲಿನ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆ ಸಂಬಂಧ ಆರ್ಜೆಡಿ ನಾಯಕರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ತಲಾ ₹ 1 ಲಕ್ಷ ಮೊತ್ತದ ಬಾಂಡ್ ನೀಡುವಂತೆ ಸೂಚಿಸಿ ಜಾಮೀನು ನೀಡಿರುವ ನ್ಯಾಯಾಲಯ, ವಿಚಾರಣೆಯನ್ನು ಇದೇ ತಿಂಗಳ 25ಕ್ಕೆ ಮುಂದೂಡಿದೆ.


ಬಳಿಕ ಮಾತನಾಡಿರುವ ತೇಜಸ್ವಿ, ‘ರಾಜಕೀಯ ಪಿತೂರಿ ನಡೆಸಲಾಗುತ್ತಿದೆ. ತನಿಖಾ ಸಂಸ್ಥೆಗಳನ್ನು ದರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ. ನಮಗೆ ಜಯ ಸಿಗುವುದು ನಿಶ್ಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version