ಬೆಂಗಳೂರು-ಮಂಗಳೂರು ರೈಲು ಮಾರ್ಗದಲ್ಲಿ ಮತ್ತೆ ಭೂಕುಸಿತ: ರೈಲು ಸಂಚಾರ ಸ್ಥಗಿತ

Prasthutha|

- Advertisement -

ಸಕಲೇಶಪುರ: ರೈಲ್ವೆ ಹಳಿ ಮೇಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿತವಾಗಿದ್ದು, ಮರಗಳ ಸಮೇತವಾಗಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿರುವ ಘಟನೆ
ತಾಲೂಕಿನ ಬಾಳ್ಳುಪೇಟೆ ಸಮೀಪ ಕಿಲೋಮೀಟರ್ ಸಂಖ್ಯೆ 42/43 ರ ಮಧ್ಯೆ ನಡೆದಿದೆ‌.

ಇದರಿಂದ ಹಾಸನ-ಮಂಗಳೂರು ಮಾರ್ಗದ ರೈಲುಗಳ ಸಂಚಾರ ಸ್ಥಗಿತವಾಗಿದೆ.

- Advertisement -

ಶುಕ್ರವಾರ (ಆಗಸ್ಟ್ 9) ಮಧ್ಯರಾತ್ರಿ ಈ ಘಟನೆ ನಡೆದಿದ್ದು ಹಾಸನದಿಂದ ಮಂಗಳೂರಿಗೆ, ಮಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ರೈಲುಗಳ ಸಂಚಾರ ಸ್ಥಗಿತವಾಗಿದೆ.

ಸಕಲೇಶಪುರ, ಯಡಕುಮಾರಿ, ಶಿರವಾಗಿಲು, ಆಲೂರು ಸೇರಿ ಆರು ಕಡೆ ಆರು ರೈಲುಗಳು ನಿಂತಿವೆ. ದಿಢೀರ್ ರೈಲುಗಳು ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.



Join Whatsapp