ಕಾಂಪೌಂಡ್ ಗೋಡೆ ಕುಸಿದು ಮುಂಬೈಯಲ್ಲಿ 11 ಬಲಿ: ಹಲವರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ

Prasthutha|

ಮುಂಬೈ, ಜುಲೈ 18 : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಆವರಣ ಗೋಡೆ ಕುಸಿದ ಪರಿಣಾಮ ಕನಿಷ್ಠ 11 ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆಂದು ತಿಳಿದುಬಂದಿದೆ. ರಕ್ಷಣಾ ಕಾರ್ಯ ಭರದಿಂದ ಸಾಗುತ್ತಿದೆ.

- Advertisement -


ಮಹಾರಾಷ್ಟ್ರದ ಚೆಂಬೂರಿನ ಭಾರತಿ ನಗರ ಎಂಬಲ್ಲಿ ಉಂಟಾದ ಭೂಕುಸಿತದಿಂದಾಗಿ ಆವರಣ ಗೋಡೆ ಕುಸಿದಿದ್ದು, ಗೋಡೆಯ ತಳಭಾಗದಲ್ಲಿದ್ದ ಗುಡಿಸಲುಗಳ ಮೇಲೆ ಬಿದ್ದಿದೆ. ಈ ವೇಳೆ ಗುಡಿಸಲಿನಲ್ಲಿದ್ದ ಸುಮಾರು 11 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಅವಶೇಷಗಳಡಿ ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.


ಘಟನಾ ಸ್ಥಳಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದವರು ದೌಡಾಯಿಸಿದ್ದು, ಅಗ್ನಿ ಶಾಮಕ ದಳದೊಂದಿಗೆ ಸೇರಿ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆಯೆಂದು ಹೇಳಲಾಗಿದೆ.

Join Whatsapp