ಐಎಎಸ್ v/s ಐಪಿಎಸ್ ಫೈಟ್| ಕರ್ಮ ನಿಮ್ಮನ್ನು ಬಿಡುವುದಿಲ್ಲ ಎಂದ ಡಿಕೆ ರವಿ ಪತ್ನಿ

Prasthutha|

- Advertisement -

ಬೆಂಗಳೂರು: ಐಎಎಸ್ ಮತ್ತು ಐಪಿಎಸ್ ಮಹಿಳಾ ಅಧಿಕಾರಿಗಳ ನಡುವಿನ ಜಗಳ ತಾರಕಕ್ಕೇರುತ್ತಿದ್ದಂತೆಯೇ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಅವರ ಪತ್ನಿ ಕುಸುಮಾ ಹನುಮಂತರಾಯಪ್ಪ ಟ್ವೀಟ್ ಮಾಡಿರುವುದು ತೀವ್ರ ಕುತೂಹಲ ಮೂಡಿಸಿದೆ.

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪ ಸರಣಿ ಆರೋಪಗಳನ್ನು ಮಾಡುತ್ತಿದ್ದು, ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.

- Advertisement -

ಇದರ ಬೆನ್ನಲ್ಲೇ ಡಿ.ಕೆ ರವಿ ಪತ್ನಿ ಕುಸುಮಾ ಟ್ವೀಟ್ ಮಾಡಿದ್ದು, “ Karma will get back at you , sooner or later it surely will ” (ನಿಧಾನವಾಗಿ ಅಥವಾ ವೇಗವಾಗಿ, ಒಟ್ಟಿನಲ್ಲಿ ಕರ್ಮ ನಿಮ್ಮನ್ನು ಬಿಡುವುದಿಲ್ಲ) ಎಂದು ಹೇಳಿದ್ದಾರೆ.

ರೋಹಿಣಿ ಸಿಂಧೂರಿ ವಿರುದ್ಧದ ಆರೋಪದಲ್ಲಿ ರೂಪಾ ಮೌದ್ಗಿಲ್ ಅವರು ಡಿ.ಕೆ ರವಿ ಸಾವಿನ ಪ್ರಕರಣವನ್ನು ಉಲ್ಲೇಖಿಸಿದ್ದರು.

“ಐಎಎಸ್ ಅಧಿಕಾರಿ ಡಿ.ಕೆ ರವಿ ಓರ್ವ ಸಂಭಾವಿತ ವ್ಯಕ್ತಿಯಾಗಿದ್ದಾರೆ. ಸಿಬಿಐ ವರದಿಯಲ್ಲಿ ಅವರ ಚಾಟ್ಸ್ ಬಗ್ಗೆ ಉಲ್ಲೇಖವಿದ್ದು, ರವಿ ಅವರು ಎಂದಾದರೂ ಎಲ್ಲೆ ಮೀರಿ ಮೆಸೇಜ್ ಮಾಡಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಆದರೆ ರೋಹಿಣಿ, ಡಿ.ಕೆ ರವಿ ಅವರನ್ನು ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ. ಡಿ.ಕೆ. ರವಿ ತೀರಿ ಹೋದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, ಐಪಿಎಸ್ ಅಧಿಕಾರಿ ಎನ್ ಹರೀಶ್ ಅವರ ಜತೆ ರೋಹಿಣಿ ಮದುವೆಯಾಗಲಿದ್ದಾರೆ ಎಂಬ ವಿಚಾರ ಹರಿದಾಡಿತ್ತು. ಆದರೆ ಅವರು ಈಕೆಗಾಗಿ ಕಾದು ಕಾದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ. ಈಗಲೂ ನಂಬಿಲ್ಲ” ಎಂದು ರೂಪಾ ಮೌದ್ಗಿಲ್ ಟ್ವೀಟ್ ಮಾಡಿದ್ದರು.

Join Whatsapp