ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ: ಕುಮಾರಸ್ವಾಮಿ

Prasthutha|

ಬೆಂಗಳೂರು: ರಾಜ್ಯದಲ್ಲಿ ಕಾನೂನು ಸಂಪೂರ್ಣವಾಗಿ ಕುಸಿದಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.

- Advertisement -


ಚನ್ನಗಿರಿಯಲ್ಲಿ ಪೊಲೀಸ್ ಠಾಣೆ ಮೇಲೆ ದಾಳಿ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಸರ್ಕಾರದ ಅಧಿಕಾರಿಗಳಿಗೆ ಯಾರು ಗೌರವ ಕೊಡುವ ವಾತಾವರಣ ಇಲ್ಲ. ಯಾವ ಪೊಲೀಸ್ ಅಧಿಕಾರಿಗಳಿಗೂ ಈ ರಾಜ್ಯದಲ್ಲಿ ಗೌರವವಿಲ್ಲ. ಈ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಉಪಯೋಗ ಮಾಡಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಸಂಪೂರ್ಣವಾಗಿ ಕಾನೂನು ಕುಸಿತವಾಗಿದೆ ಎಂದು ಕಿಡಿಕಾರಿದರು.
ಪೊಲೀಸ್ ಇಲಾಖೆ ಕಠಿಣವಾಗಿ ತೀರ್ಮಾನ ಮಾಡದೇ ಇರುವ ರೀತಿ ವಾತಾವರಣ ಸೃಷ್ಟಿ ಈ ಸರ್ಕಾರ ಮಾಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿ. ಇದು ಅವರೇ ಮಾಡಿಕೊಂಡಿರುವ ಕೆಲಸ. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲಿ ವಿಶ್ವಾಸ ಇಲ್ಲ. ಜನರಲ್ಲೂ ವಿಶ್ವಾಸ ಇಲ್ಲ ಎಂದು ವಾಗ್ದಾಳಿ ನಡೆಸಿದರು.

Join Whatsapp