ಲಕ್ಷ್ಮಣ ಸವದಿಯವರು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದಾರೆ: ಬಿ.ವೈ ವಿಜಯೇಂದ್ರ

Prasthutha|

ಶಿವಮೊಗ್ಗ: ಲಕ್ಷ್ಮಣ್ ಸವದಿಯವರು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದಾರೆ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

- Advertisement -


ಈ ಕುರಿತು ಮಾತನಾಡಿದ ಬಿ.ವೈ ವಿಜಯೇಂದ್ರ, ನಾವಾಗಿ ಯಾರ ಹಿಂದೆ ಹೋಗುತ್ತಿಲ್ಲ. ಅವರೇ ಬರುತ್ತಿದ್ದಾರೆ. ಪಕ್ಷಕ್ಕೆ ಯಾರು ಬಂದರೂ ಸ್ವಾಗತ. ಕಾಂಗ್ರೆಸ್ ಮೊದಲು ಇರುವರನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ ಎಂದರು.


ಇನ್ನು ಜಗದೀಶ್ ಶೆಟ್ಟರ್ ಮರಳಿ ಬಂದಿದ್ದಾರೆ. ಅವರು ಯಾವುದೇ ಬೇಡಿಕೆ ಇಟ್ಟಿಲ್ಲ. ಮೋದಿ ಪ್ರಧಾನಿಯಾಗಬೇಕೆಂಬುದು ಅಷ್ಟೇ ಉದ್ದೇಶ. ಕಾರ್ಯಕರ್ತರು ಉತ್ಸಾಹದಲ್ಲಿದ್ದಾರೆ. 28 ಕ್ಕೆ 28 ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.

Join Whatsapp
Exit mobile version