ಪಕ್ಷ ಬಲವರ್ಧನೆಗೆ ಮುಖಂಡರು ಒತ್ತು ನೀಡಬೇಕಾಗಿದೆ: ಅನ್ವರ್ ಸಾದತ್ ಬಜತ್ತೂರು

Prasthutha|

ದೇರಳಕಟ್ಟೆ ಕಚೇರಿಯಲ್ಲಿ ಎಸ್ಡಿಪಿಐ ಕ್ಷೇತ್ರ ಸಮಿತಿಯ ಸಾಮಾನ್ಯ ಸಭೆ

- Advertisement -

ದೇರಳಕಟ್ಟೆ: ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಬಲವರ್ಧನೆಗೆ ಒತ್ತು ನೀಡಬೇಕಾಗಿದೆ ಎಂದು ಎಸ್ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದತ್ ಬಜತ್ತೂರು ಪಕ್ಷದ ಮುಖಂಡರಿಗೆ ಕರೆ ನೀಡಿದ್ದಾರೆ.

ಪಕ್ಷದ ದೇರಳಕಟ್ಟೆ ಕಚೇರಿಯಲ್ಲಿ ನಡೆದ ಮಂಗಳೂರು ಕ್ಷೇತ್ರ ಸಮಿತಿಯ ಸಾಮಾನ್ಯ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

- Advertisement -

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರಾಧ್ಯಕ್ಷ ಬಶೀರ್ ಎಸ್. ಎಮ್. ಮಾತನಾಡಿ ,ಪಕ್ಷದ ಶಿಸ್ತನ್ನು ಎಲ್ಲಾ ಸಂದರ್ಭದಲ್ಲಿ ಮೈಗೂಡಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ನವಾಜ್ ಉಳ್ಳಾಲ್, ಕ್ಷೇತ್ರ ಸಮಿತಿ ಉಪಾಧ್ಯಕ್ಷ ಫಾರೂಕ್ ಝಲ್’ಝಲ್, ಕಾರ್ಯದರ್ಶಿಗಳಾದ ಉಬೈದ್ ಅಮ್ಮೆಂಬಳ, ಅಶ್ರಫ್ ಮಂಚಿ, ಕ್ಷೇತ್ರ ಸಮಿತಿಯ ಸದಸ್ಯರುಗಳು, ಬ್ಲಾಕ್ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ನಗರಸಮಿತಿ-ಪಟ್ಟಣ ಸಮಿತಿ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು

ಕ್ಷೇತ್ರ ಕಾರ್ಯದರ್ಶಿ ಉಬೈದ್ ಅಮ್ಮೆಂಬಳ ಸ್ವಾಗತಿಸಿ ,
ಅಶ್ರಫ್ ಮಂಚಿ ಧನ್ಯವಾದಗೈದರು.



Join Whatsapp