ಮೂಗಿಗೆ ನಿಂಬೆ ಹಣ್ಣಿನ ರಸ ಹಾಕಿಕೊಂಡ ಶಿಕ್ಷಕ ನರಳಿ ಸಾವು

Prasthutha|

►ಇತ್ತೀಚೆಗೆ ಸುದ್ದಿಯಾಗಿತ್ತು ವಿಜಯ ಸಂಕೇಶ್ವರರ ನಿಂಬೆ ರಸದ ಹೇಳಿಕೆ!

- Advertisement -

ರಾಯಚೂರು : ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡ ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಶಿಕ್ಷಕರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಶರಣಬಸವೇಶ್ವರ ಕಾಲನಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಸವರಾಜ ಎಂದು ಗುರುತಿಸಲಾಗಿದೆ. ಆರೋಗ್ಯವಾಗಿದ್ದ ಇವರು ಮೂಗಿನೊಳಗೆ ನಿಂಬೆ ಹಣ್ಣಿನ ರಸ ಹಾಕಿಸಿಕೊಂಡ ಬಳಿಕ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಭಾರೀ ಸುದ್ದಿಯಾಗಿತ್ತು ವಿಜಯ್ ಸಂಕೇಶ್ವರ್ ಹೇಳಿಕೆ!

- Advertisement -

ಮೂಗಿನಲ್ಲಿ ನಿಂಬೆ ಹಣ್ಣಿನ ರಸ ಹಾಕುವುದರಿಂದ ಆಕ್ಸಿಜನ್ ಸಮಸ್ಯೆ ನಿವಾರಣೆಯಾಗುತ್ತದೆ, ಇದನ್ನು ಸ್ವತಹ ನಾನೂ ಪ್ರಯತ್ನ ಮಾಡಿದ್ದೇನೆ ಎಂದು ಇತ್ತೀಚೆಗಷ್ಟೆ ವಿಆರ್‌ಎಲ್ ಸಮೂಹ ಸಂಸ್ಥೆಯ ಮುಖ್ಯಸ್ಥ ವಿಜಯ್ ಸಂಕೇಶ್ವರ್ ಹೇಳಿಕೆ ನೀಡಿದ್ದರು. ಈ ವಿಚಾರ ಬಹಳಷ್ಟು ಗ್ರಾಸವಾಗಿತ್ತಲ್ಲದೇ ಪರ ವಿರೋಧದ ಚರ್ಚೆಗೂ ಕಾರಣವಾಗಿತ್ತು.

Join Whatsapp