ಹಿಜಾಬ್ ಧರಿಸಿ ತರಗತಿ ಪ್ರವೇಶಿಸಿದರೆ ಕಾನೂನು ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಇನ್ನು ಮುಂದೆ ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ತರಗತಿಗೆ ಹೋಗುವಂತಿಲ್ಲ. ಈಗಾಗಲೇ ಈ ಸಂಬಂಧ ಹೈಕೋರ್ಟ್ ತೀರ್ಪು ನೀಡಿದೆ. ಒಂದು ವೇಳೆ ಬಲವಂತದಿಂದ ತರಗತಿ ಪ್ರವೇಶಿಸಿದರೆ ಅವರ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

- Advertisement -

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, ಇನ್ನು ಸಹಿಸಿಕೊಂಡು ಸುಮ್ಮನೆ ಕೂರಲು ಆಗುವುದಿಲ್ಲ. ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಪ್ರಯತ್ನಿಸುವವರ ವಿರುದ್ಧ ಖಂಡಿತಾ ಕ್ರಮವಾಗಲಿದೆ ಎಂದು ಎಚ್ಚರಿಸಿದರು.

ಎರಡು ವರ್ಷಗಳಿಂದ ಶಿಕ್ಷಣ ಹಾಳಾಗಿದೆ. ಈ ವರ್ಷವಾದರೂ ಶಿಕ್ಷಣ ಸಿಗಲಿ, ಯಾರೋ ಮತಾಂಧರು ವಿದ್ಯಾರ್ಥಿಗಳ ತಲೆಗೆ ಮತಾಂಧತೆ ತುಂಬಿದ್ದಾರೆ. ನಾವೆಲ್ಲಾ ಈ ದೇಶದ ಮಕ್ಕಳು ಎಂಬ ಭಾವನೆ ಶಾಲೆಯಿಂದಲೇ ಆಗಬೇಕು ಎಂದರು.

Join Whatsapp