ವಿಧಾನ ಪರಿಷತ್ ಚುನಾವಣೆ SDPI ವತಿಯಿಂದ ಬಂಟ್ವಾಳದಲ್ಲಿ ಪ್ರಚಾರ ಸಭೆ

Prasthutha|

ಬಂಟ್ವಾಳ: ಎಸ್ ಡಿಪಿಐ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವತಿಯಿಂದ ದಕ್ಷಿಣ ಕನ್ನಡ ವಿಧಾನ ಪರಿಷತ್ ಚುನಾವಣಾ ಅಂಗವಾಗಿ ಪಕ್ಷದ ಅಭ್ಯರ್ಥಿ ಶಾಫಿ ಬೆಳ್ಳಾರೆ ಪರವಾಗಿ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಕಾರ್ಯ ನಡೆಸುವ ಬಗ್ಗೆ ಕ್ಷೇತ್ರದ ನಾಯಕರೊಂದಿಗೆ ಮತ್ತು ಪಕ್ಷದ ಚುನಾಯಿತ ಜನಪ್ರತಿನಿಧಿಗಳೊಂದಿಗೆ ಕಲ್ಲಡ್ಕ, ತುಂಬೆ ಮತ್ತು ಬಿ.ಸಿ.ರೋಡ್ ನಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ನೇತೃತ್ವದಲ್ಲಿ ಪ್ರಚಾರ ಸಭೆ ನಡೆಸಲಾಯಿತು.

- Advertisement -


ಈ ಸಂದರ್ಭದಲ್ಲಿ ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿ ಶಾಫಿ ಬೆಳ್ಳಾರೆ, ಎಸ್ ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫಾನ್ಸೋ ಫ್ರಾಂಕೋ, ರಿಯಾಝ್ ಫರಂಗಿಪೇಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು, ಕ್ಷೇತ್ರಾಧ್ಯಕ್ಷರಾದ ಶಾಹುಲ್ ಹಮೀದ್, ಜಿಲ್ಲಾ ಕಾರ್ಯದರ್ಶಿಯಾದ ಶಾಕಿರ್ ಅಲಕೆಮಜಲ್, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ, ಕ್ಷೇತ್ರ ಕಾರ್ಯದರ್ಶಿ ಮೂನಿಷ್ ಆಲಿ, ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ಖಲಂದರ್ ಪರ್ತಿಪಾಡಿ, ಕ್ಷೇತ್ರ ಕೋಶಾಧಿಕಾರಿ ಫೈಝಲ್ ಮಂಚಿ ಹಾಗೂ ಕಲ್ಲಡ್ಕ ಬ್ಲಾಕ್ ಅಧ್ಯಕ್ಷರಾದ ಸತ್ತಾರ್ ಕಲ್ಲಡ್ಕ, ಸಂಗಬೆಟ್ಟು ಬ್ಲಾಕ್ ಅಧ್ಯಕ್ಷರಾದ ಸುಲೈಮಾನ್ ಉಸ್ತಾದ್, ಪುರಸಭಾ ಸಮಿತಿ ಅಧ್ಯಕ್ಷರಾದ ಶರೀಫ್ ವಳವೂರು, ಕಾರ್ಯದರ್ಶಿ ಇಕ್ಬಾಲ್ ಮೈನ್ಸ್ ಮತ್ತು ಪಕ್ಷದ ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Join Whatsapp