ವಿಧಾನ ಪರಿಷತ್ ಚುನಾವಣೆ: ಚುನಾವಣಾ ಕಣದಿಂದ ಹಿಂದೆ ಸರಿದ ಎಂ.ಎನ್.ರಾಜೇಂದ್ರ ಕುಮಾರ್

Prasthutha|

ಮಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿ ಚುನಾವಣಾ ಕಚೇರಿಯನ್ನು ಕೂಡ ಉದ್ಘಾಟಿಸಿದ್ದ ಸಹಕಾರಿ ಧುರೀಣ ಎಂ.ಎನ್.ರಾಜೇಂದ್ರ ಕುಮಾರ್ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಶನಿವಾರ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ.

- Advertisement -


ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಎಂ ಎನ್ ರಾಜೇಂದ್ರ ಕುಮಾರ್ ಅವರು ಕಣದಿಂದ ಹಿಂದೆ ಸರಿದಿದ್ದಕ್ಕೆ ಸ್ಪಷ್ಟ ಕಾರಣ ನೀಡಿಲ್ಲ.

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾಜೇಂದ್ರ ಕುಮಾರ್, ಒಮ್ಮೆ ಚುನಾವಣಾ ಕಣಕ್ಕೆ ಇಳಿದರೆ ಯಾವುದಾದರು ಒಂದ ಪಕ್ಷದ ಕಡೆ ವಾಲಲೇಬೇಕಾಗುತ್ತದೆ. ಹಾಗಾಗಿ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ ನಿಂದ ಟಿಕೆಟ್ ಕೊಟ್ಟರೂ ಸ್ಪರ್ಧಿಸುವುದಿಲ್ಲ. ಕಣದಿಂದ ಹಿಂದೆ ಸರಿದಿರುವ ನಿರ್ಧಾರ ಅಚಲ ಎಂದರು.

Join Whatsapp