Home ಕರಾವಳಿ ಬಂಟ್ವಾಳ: ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಬಲಿ

ಬಂಟ್ವಾಳ: ಚಿರತೆ ದಾಳಿಗೆ ಮೇಯಲು ಬಿಟ್ಟಿದ್ದ ದನ ಬಲಿ

ಬಂಟ್ವಾಳ: ತೋಟದಲ್ಲಿ ಮೇಯಲು ಬಿಟ್ಟಿದ್ದ ದನವನ್ನು ಚಿರತೆಯೊಂದು ದಾಳಿ ನಡೆಸಿ ಕೊಂದು ಹಾಕಿದ ಘಟನೆ ಪಂಜಿಕಲ್ಲು ಗ್ರಾಮದ ಕೇಲ್ದೋಡಿ ಎಂಬಲ್ಲಿ ನಡೆದಿದೆ.

ಕೇಲ್ದೊಡಿ ನಿವಾಸಿ ಶೀನಪ್ಪ ಪೂಜಾರಿ ಅವರಿಗೆ ಸೇರಿದ ತೋಟದಲ್ಲಿದ್ದ ದನವು ಭಾಗಶಃ ತಿಂದು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಎರಡು ದನಗಳನ್ನು ತೋಟದಲ್ಲಿ ಮೇಯಲು ಬಿಡಲಾಗಿತ್ತು. ಒಂದು ದನವು ಸಂಜೆ ಮನೆಗೆ ಬರದೆ ತೋಟದಲ್ಲಿಯೇ ಮಲಗಿತ್ತು ಎನ್ನಲಾಗಿದೆ. ಬೆಳಗ್ಗೆ ನೋಡುವಾಗ ತೋಟದ ಒಂದು ಮೂಲೆಯಲ್ಲಿ ಅರ್ಧ ತಿಂದು ಹಾಕಿದ ಸ್ಥಿತಿಯಲ್ಲಿ ದನದ ಮೃತದೇಹ ಪತ್ತೆಯಾಗಿದೆ.

ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಪಶು ವೈದ್ಯಾಧಿಕಾರಿ ಅವಿನಾಶ್ ಭಟ್ ಹಾಗೂ ಸ್ಥಳೀಯ ಗ್ರಾ.ಪಂ.ಲಕ್ಷಣ್ ಅವರು ಬೇಟಿ ನೀಡಿದ್ದಾರೆ.

Join Whatsapp
Exit mobile version