ಚಿರತೆ ದಾಳಿಗೆ ಯುವತಿ ಬಲಿ: 7 ಲಕ್ಷ ಪರಿಹಾರ, ಚಿರತೆ ಶೂಟೌಟ್’ಗೆ ಆದೇಶ

Prasthutha|

ಮೈಸೂರು: ಚಿರತೆ ದಾಳಿಯಿಂದ ಮೃತಪಟ್ಟ ಮೇಘನಾ ಕುಟುಂಬಕ್ಕೆ 7 ಲಕ್ಷ ರೂ. ಪರಿಹಾರ ನೀಡಲಾಗುವುದು ಹಾಗೂ ಚಿರತೆ ಕಂಡಲ್ಲಿ ಗುಂಡು ಹಾರಿಸಲು ಸರ್ಕಾರದಿಂದ ಆದೇಶವೂ ಸಿಕ್ಕಿದೆ ಎಂದು ಮೈಸೂರು ವೃತ್ತ ಅರಣ್ಯಾಧಿಕಾರಿ ಮಾಲತಿ ಪ್ರಿಯಾ ಹೇಳಿದ್ದಾರೆ.

- Advertisement -


ಯುವತಿ ಮೃತಪಟ್ಟ ಸಾರ್ವಜನಿಕ ಆಸ್ಪತ್ರೆ ಮುಂಭಾಗ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಈ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ ಮಾಲತಿ ಪ್ರಿಯಾ, ಮೃತ ಯುವತಿಯ ಕುಟುಂಬಕ್ಕೆ 7ಲಕ್ಷ ರೂ. ಪರಿಹಾರ ಘೋಷಣೆ ಮಾಡಿದರು. ಕುಟುಂಬದ ಓರ್ವರಿಗೆ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ನೀಡುತ್ತೇವೆ ಎಂದು ಭರವಸೆಕೊಟ್ಟರು. ಚಿರತೆ ಹಾವಳಿ ನಿಯಂತ್ರಿಸಲು ತಿ. ನರಸೀಪುರ ತಾಲ್ಲೂಕಿನಲ್ಲಿ 15 ತಜ್ಞರ ತಂಡ ನೇಮಕ ಮಾಡುತ್ತೇವೆ ಎಂದು ಹೇಳಿದ್ದಾರೆ.



Join Whatsapp