ಸಿದ್ದರಾಮಯ್ಯ ಅಪಪ್ರಚಾರ ಮಾಡುವುದನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಜೈಲಿಗೆ ಯಾಕೆ ಹೋದರು ಎಂಬುದನ್ನು ಜನತೆಗೆ ತಿಳಿಸಲಿ: ಎಸ್.ಟಿ.ಸೋಮಶೇಖರ್

Prasthutha|

ಹಾನಗಲ್: ಸಿದ್ದರಾಮಯ್ಯ ಅವರು ಅಪಪ್ರಚಾರ ಮಾಡುವುದನ್ನು ಬಿಟ್ಟು ಡಿ.ಕೆ.ಶಿವಕುಮಾರ್ ಜೈಲಿಗೆ ಯಾಕೆ ಹೋದರು? ಐಟಿ ದಾಳಿ ಯಾಕೆ ಆಯಿತು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

- Advertisement -

ಹಾನಗಲ್ ನಲ್ಲಿ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಯಡಿಯೂರಪ್ಪ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದಾದರೆ ಲೋಕಾಯುಕ್ತ ಇದೆ, ಐಟಿ ಇದೆ. ಲಿಖಿತವಾಗಿ ದೂರು ಕೊಡಲಿ, ಆದರೆ ಯಾವ ದೂರು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

ಸೋಲುವುದು ಗೊತ್ತಾಗುತ್ತಿದ್ದಂತೆ ಈ ರೀತಿ ಗಿಮಿಕ್ ಮಾಡ್ತಾರೆ. ಗೃಹ ಸಚಿವರಾಗಿ, ನೀರಾವರಿ ಸಚಿವರಾಗಿ ಈಗ ಮುಖ್ಯಮಂತ್ರಿ ಆಗಿರುವ ಬಸವರಾಜ್ ಬೊಮ್ಮಾಯಿ‌ ಅವರ ಮೇಲೆ ಯಾವುದಾದರೂ ಆರೋಪವಿದೆಯೇ ಜನರಿಗೆ ಒಳ್ಳೆ ಕೆಲಸ ಮಾಡಬೇಕೆಂದು ಬಂದಿದ್ದಾರೆ. ಮೋದಿ ಅವರಿಗೆ ವಿಶ್ವದಲ್ಲಿ ಒಳ್ಳೆ ಹೆಸರಿದೆ. ಭಾರತಕ್ಕೆ ಹೆಸರು ತಂದುಕೊಟ್ಟವರು ಎಂದರು.

- Advertisement -

ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಹಣ ಹಂಚಿಕೆ ಮಾಡಲಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ  ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಬಿಜೆಪಿ ಹಣ ಹಂಚುವ ಕೆಲಸ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳ ಪ್ರಕಾರ ಮತಯಾಚಿಸುತ್ತೇವೆ ಹೊರತು ಮತದಾರರಿಗೆ ಹಣ ಹಂಚುವ ಕೆಲಸ ಮಾಡಿಲ್ಲ. ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರಿಗೆ ಬಗೆಹರಿಯುತ್ತಿಲ್ಲ. ಅವರದ್ದು ಬಗೆಹರಿಸಿಕೊಳ್ಳಲು ಹೊಸ ಹೊಸದನ್ನು ಹುಡುಕುತ್ತಾರೆ ಎಂದು ಹೇಳಿದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ.ಉದಾಸಿ ಅವರು ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಅವರು ಕೂಡ ಹಲವು ಹೊಸ ಹೊಸ ಕಾರ್ಯಕ್ರಮಗಳನ್ನು ಮಾಡಲು ಉಮ್ಮಸ್ಸು ಹೊಂದಿದ್ದಾರೆ ಎಂದರು.

ಪಕ್ಷದ ಪರ ಮನೆಮನೆ ಪ್ರಚಾರ  ಮಾಡಲಾಗುವುದು. ಮುಖ್ಯಮಂತ್ರಿಗಳು ಮತ್ತು ಸಚಿವ ಬಿ.ಸಿ.ಪಾಟೀಲ್ ಅವರು ಇದೇ ಜಿಲ್ಲೆಯವರಾದ್ದರಿಂದ ಬಿಜೆಪಿ ಗೆಲುವು ಸಾಧಿಸಲಿದೆ. ಜನರು ಸಹ ಸಾಕಷ್ಟು ನಿರೀಕ್ಷೆಗಳನ್ನು ಹೊಂದಿದ್ದು ಅದನ್ನು ಮುಖ್ಯಮಂತ್ರಿಗಳು ಈಡೇರಿಸಲಿದ್ದಾರೆ ಎಂದು ಭರವಸೆ ನೀಡಿದರು.

Join Whatsapp