ರಾಜ್ಯ ಸರ್ಕಾರ ಜನಸ್ಪಂದನ ಬದಲು ಜಲಸ್ಪಂದನ ಮಾಡಲಿ: ಡಿ.ಕೆ. ಶಿವಕುಮಾರ್

Prasthutha|

ಬೆಂಗಳೂರು: ‘ರಾಜ್ಯ ಸರ್ಕಾರ ಬೆಂಗಳೂರಿನ ಐಟಿ ಕಾರಿಡಾರ್ ನಲ್ಲಿ ಜಲಸಂಚಾರ ಕ್ಕಾಗಿ ಬೋಟ್ ಫ್ಯಾಕ್ಟರಿ ಆರಂಭಿಸುವುದು ಉತ್ತಮ. ಬಿಜೆಪಿ ಅವರು ಜನಸ್ಪಂದನ ಬದಲಾಗಿ ಮೊದಲು ಜಲಸ್ಪಂದನ ಕೆಲಸ ಮಾಡಲಿ ‘ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಟೀಕಿಸಿದ್ದಾರೆ.

- Advertisement -

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ‘ಬೆಂಗಳೂರು ಹಾಗೂ ರಾಜ್ಯದ ಇತರ ಭಾಗಗಳಲ್ಲಿ ನಿರಂತರ ಮಳೆ ಬೀಳುತ್ತಿದೆ. ಈ ರಾಜ್ಯ ಸರ್ಕಾರಕ್ಕೆ ಬೆಂಗಳೂರಿನ ಬೆಲೆ ತಿಳಿದಿಲ್ಲ. ಬೆಂಗಳೂರು ಎಷ್ಟು ಜನರಿಗೆ ಉದ್ಯೋಗ ನೀಡಿದೆ ಎಂಬುದು ಗೊತ್ತಿಲ್ಲ. ದೇಶಕ್ಕೆ ಸುಮಾರು 30 % ರಷ್ಟು ತೆರಿಗೆ ಆದಾಯ ಕೇಂದ್ರಕ್ಕೆ ಇಲ್ಲಿಂದಲೇ ಹೋಗುತ್ತದೆ.

ನಾನು ಬೆಂಗಳೂರು ನಿವಾಸಿಯಾಗಿದ್ದು, ನಮಗೆ ಒಂದು ಅವಕಾಶ ನೀಡಿ. ನಾವು ನಿಮ್ಮ ಗೌರವ ಕಾಪಾಡಿ ಉತ್ತಮ ಬದುಕು ನೀಡುವಂತಹ ಆಡಳಿತ ನೀಡುತ್ತೇವೆ’ ಎಂದು ಜನರಿಗೆ ಮನವಿ ಮಾಡಿದರು.

- Advertisement -

ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರು ಮಾನ ಹರಾಜಾಗುತ್ತಿರುವ ಬಗ್ಗೆ ಕೇಳಿದಾಗ, ‘ನಮಗೆ ಅವಕಾಶ ಕೊಟ್ಟರೆ ನಾವು ಬೆಂಗಳೂರಿನ ಬ್ರ್ಯಾಂಡ್ ಅನ್ನು ಮರುಸ್ಥಾಪಿಸುತ್ತೇವೆ’ ಎಂದು ಉತ್ತರಿಸಿದರು.



Join Whatsapp