ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರವನ್ನು ಒಪ್ಪಿಸಲಿ: ಎಚ್‌ಡಿಕೆ

- Advertisement -

ಮೈಸೂರು: ‘ ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ. ನಾನು ಐದು ನಿಮಿಷದಲ್ಲಿ ಪ್ರಧಾನಮಂತ್ರಿಯಿಂದ ಒಪ್ಪಿಗೆ ಕೊಡಿಸುತ್ತೇನೆ’ ಎಂದು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.‌ ಕುಮಾರಸ್ವಾಮಿ ಹೇಳಿದರು.‌

- Advertisement -

ಶನಿವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ ಕಾಂಗ್ರೆಸ್ ನವರಿಗೆ ತಮಿಳುನಾಡಿನವರನ್ನು ಒಪ್ಪಿಸುವ ಶಕ್ತಿ ಇಲ್ಲ. ಅವರನ್ನು ಧಿಕ್ಕರಿಸುವ ಶಕ್ತಿಯೂ ಇಲ್ಲ’ ಎಂದು ಟೀಕಿಸಿದರು.

‘ ತಮಿಳುನಾಡನ್ನು ಧಿಕ್ಕರಿಸಿ ಯೋಜನೆ ಮಾಡಿದರೆ ಅದು ಆಗುತ್ತದೆ. ತಮಿಳುನಾಡು ಸರ್ಕಾರವನ್ನು ಒಪ್ಪಿಸದೇ ಮೇಕೆದಾಟು ಯೋಜನೆ ಕಚೇರಿ ತೆರೆದರೆ ಏನು ಪ್ರಯೋಜನ’ ಎಂದು ಪ್ರಶ್ನಿಸಿದರು.

- Advertisement -

‘ ಯೋಜನೆ ಮಾಡುತ್ತೇವೆ ಎಂದು ಹೇಳಿದವರು ಕಾಂಗ್ರೆಸ್ ನವರು. ಸುಮ್ಮನೆ ಕಾಲಾಹರಣ ಮಾಡಿ, ನಮ್ಮ ಮೇಲೆ ಜವಾಬ್ದಾರಿ ಹೊರಿಸಿದರೆ ಏನು ಪ್ರಯೋಜ‌ನ’ ಎಂದರು.

‘ ಕಾಂಗ್ರೆಸ್ ನವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿಯೇ ಪದೇ ಪದೇ ನನ್ನ ಹೆಸರು ಜಪಿಸುತ್ತಾರೆ. ಮಂಡ್ಯಕ್ಕೆ ನಾನು ಕೇವಲ ಸಂಸದರ ಅನುದಾನ ತಂದಿಲ್ಲ. ಹಲವು ವಿಶೇಷ ಅನುದಾನವನ್ನೂ ತಂದಿದ್ದೇವೆ. ಇದರ ಮಾಹಿತಿ ಇಲ್ಲದೆಯೇ ಮಾತನಾಡಬಾರದು’ ಎಂದರು.

- Advertisement -


Must Read

Related Articles