Home ಟಾಪ್ ಸುದ್ದಿಗಳು ಒಂದೇ ತಾಯಿಯ ಮಕ್ಕಳಾಗಿ ಭಾರತ ನಿರ್ಮಾಣ ಮಾಡೋಣ: ಸಚಿವ ಎಸ್ ಮಧು ಬಂಗಾರಪ್ಪ

ಒಂದೇ ತಾಯಿಯ ಮಕ್ಕಳಾಗಿ ಭಾರತ ನಿರ್ಮಾಣ ಮಾಡೋಣ: ಸಚಿವ ಎಸ್ ಮಧು ಬಂಗಾರಪ್ಪ

ಶಿವಮೊಗ್ಗ: ಒಂದೇ ತಾಯಿಯ ಮಕ್ಕಳಾಗಿ ಭಾರತ ನಿರ್ಮಾಣ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು‌ ಸಾಕ್ಷರತಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವರಾದ ಎಸ್ ಮಧು ಬಂಗಾರಪ್ಪ ಹೇಳಿದರು.

ಇಂದು ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿ ನಡೆದ ಎನ್.ಎಸ್.ಯು. ಐ ಸಮಾವೇಶ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

ಈ ಕಾರ್ಯಕ್ರಮ ನನಗೆ ಹೊಸ ಅನುಭವ ತಂದಿದೆ. ಇಂತಹ ಕಾರ್ಯಕ್ರಮಗಳಲ್ಲಿ ನಾನು ಭಾಗಿಯಾಗಿರಲಿಲ್ಲ. ಪಕ್ಷ ಕಟ್ಟಿದ ನಿಮ್ಮ ಜೊತೆಗೆ ಸೇರಲು ಒಂದು ಅವಕಾಶ ಮಾಡಿಕೊಟ್ಟಿದ್ದಿರಿ. ನಿಮಗೆಲ್ಲರಿಗೂ ಧನ್ಯವಾದ ಹೇಳುತ್ತೇನೆ ಎಂದರು.

ಮಕ್ಕಳ ಮುಂದೆ ಸತ್ಯ ಹೇಳಬೇಕು.‌ ಮಕ್ಕಳು ದೇವರ ಸಮ. ಮಕ್ಕಳ ಮುಂದೆ ಸುಳ್ಳು ಹೇಳಬಾರದು. ಸುಳ್ಳು ಹೇಳಿದರೆ ಅದು ಶಾಪವಾಗಿ ಪರಿಣಮಿಸುತ್ತದೆ. ಇದನ್ನು ನಮ್ಮ ತಂದೆ ಬಂಗಾರಪ್ಪ ಅವರು ಹೇಳಿದ್ದಾರೆ. ‌ಮಕ್ಕಳನ್ನು ನಾವು ದೇವರ ಸ್ಥಾನದಲ್ಲಿ ನೋಡುತ್ತೇವೆ. ಅಂತಹ ಮಕ್ಕಳ ಪ್ರತಿಭೆಗೆ ಗೌರವ ಕೊಡುವ ಕೆಲಸ ಮಾಡುತ್ತಿದ್ದಿರಿ. ನಾವು ಶಿವಮೊಗ್ಗದಲ್ಲಿ ಹುಟ್ಟಿ ಬೆಳೆದು ಮಕ್ಕಳಾಗಿ ಬೆಳೆದು ಬಂದಿದ್ದೇವೆ. ಬೆಂಗಳೂರಿಗೆ ಬಂದ ಮೇಲೆ ರಾಜಕೀಯದೊಂದಿಗೆ ಹಲವು ಕೆಲಸ ಮಾಡಿಕೊಂಡು ಬಂದಿದ್ದೇವೆ ಎಂದರು.

ಇಂದಿನ ಈ ವ್ಯವಸ್ಥೆಯಲ್ಲಿ ಅವಶ್ಯಕವಾಗಿರುವ ಸಂದರ್ಭದಲ್ಲಿ ನಿಮ್ಮ ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ನೀವು ಎಲ್ಲವನ್ನೂ ಗಮನಿಸಿ ತೆಗೆದುಕೊಳ್ಳುವ ತೀರ್ಮಾನ ಬಹಳ ಮುಖ್ಯವಾಗಿರುತ್ತದೆ. ನಮ್ಮ ಪಕ್ಷದ ಪರವಾಗಿ ಎಲ್ಲವೂ ಸರಿ ಎಂದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಬಿ ವಿ ಶ್ರೀನಿವಾಸ್, ಮಾಜಿ ಎಂಎಲ್ಸಿ ಪ್ರಸನ್ನ ಕುಮಾರ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಂದರೇಶ್ ಸೇರಿದಂತೆ ಮತ್ತಿತರರ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Join Whatsapp
Exit mobile version