ಸೆಲ್ಫಿ ತೆಗೆದುಕೊಳ್ಳುವಾಗ ಬಂದೆರಗಿದ ಸಿಡಿಲು | ಹನ್ನೊಂದು ಮಂದಿ ಸ್ಥಳದಲ್ಲೇ ಸಾವು

Prasthutha|

ಜೈಪುರ: ಜೈಪುರ ಸಮೀಪದ 12ನೇ ಶತಮಾನದ ಅಮೆರ್ ಪ್ಯಾಲೆಸ್ನ ವಾಚ್ ಟವರ್ ಮೇಲೆ ಮಳೆಯಲ್ಲೇ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಿಡಿಲು ಬಡಿದ ಪರಿಣಾಮ 11 ಮಂದಿ ಮೃತಪಟ್ಟಿರುವ ಘಟನೆ ವರದಿಯಾಗಿದೆ.

- Advertisement -

ಇನ್ನು ಕೆಲವರು ಸಿಡಿಲಿನ ಶಬ್ದಕ್ಕೆ ಭಯಭೀತರಾಗಿ ವಾಚ್ ಟವರ್ ಮೇಲಿಂದ ಧುಮುಕಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ರಾಜಸ್ತಾನ ಮಾತ್ರವಲ್ಲದೇ ಮಧ್ಯಪ್ರದೇಶ, ಉತ್ತರ ಪ್ರದೇಶ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದ್ದು, ಸತತವಾಗಿ ಸುರಿಯುತ್ತಿರುವ ಮಳೆಗೆ ಹಾಗೂ ಸಿಡಿಲಾಘಾತಕ್ಕೆ ಸಿಲುಕಿ 68 ಮಂದಿ ಸಾವನ್ನಪ್ಪಿದ್ದಾಗಿ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.

- Advertisement -

ಜೈಪುರದ ಟವರ್ ಮೇಲೆ ಸಿಡಿಲು ಬಡಿಯುವ ಸಮಯಕ್ಕೆ ಅಲ್ಲಿ 27 ಮಂದಿ ಇದ್ದರು ಎನ್ನಲಾಗಿದೆ. ಘಟನೆ ಬಗ್ಗೆ ಸಂತಾಪ ಸೂಚಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ. 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಅಂತೆಯೇ ಉತ್ತರ ಪ್ರದೇಶದ ವಿವಿಧೆಡೆಗಳಲ್ಲಿ ಮಳೆ ಹಾಗೂ ಸಿಡಿಲಿನಿಂದಾಗಿ 41 ಮಂದಿ ಬಲಿಯಾಗಿದ್ದರೆ, ಮಧ್ಯಪ್ರದೇಶದಲ್ಲಿ ಏಳು ಹಾಗೂ ರಾಜಸ್ಥಾನದಲ್ಲಿ 20 ಮಂದಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.

Join Whatsapp