ಮದ್ಯ ನೀತಿ ಪ್ರಕರಣ: ಮನೀಶ್ ಸಿಸೋಡಿಯಾ ಸಿಬಿಐ ಕಸ್ಟಡಿ ಮಾ.6ರವರೆಗೆ ವಿಸ್ತರಣೆ

Prasthutha|

ನವದೆಹಲಿ: ಮದ್ಯ ನೀತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿರುವ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಆದೇಶವನ್ನು ನಗರ ನ್ಯಾಯಾಲಯವು ಶನಿವಾರ ಕಾಯ್ದಿರಿಸಿದ್ದು, ಮಾರ್ಚ್ 6 ರವರೆಗೆ ಅವರ ಬಂಧನ ವಿಸ್ತರಿಸಿ ಆದೇಶ ಹೊರಡಿಸಿದೆ.

- Advertisement -

ದೆಹಲಿ ಕ್ಯಾಬಿನೆಟ್ ಮತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಸೋಡಿಯಾ ಅವರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ನ್ಯಾಯಾಲಯ ಮಾರ್ಚ್ 10 ಕ್ಕೆ ನಿಗದಿಪಡಿಸಿದೆ ಎಂದು ತಿಳಿದು ಬಂದಿದೆ.



Join Whatsapp
Exit mobile version