500 ಕೋಟಿ ರೂ. 2ನೇ ಲಾಕ್‌ಡೌನ್ ಪ್ಯಾಕೇಜ್ ಘೋಷಣೆ| ಇಮಾಮರಿಗೂ 3000ರೂ. ನೆರವು

Prasthutha|

ಬೆಂಗಳೂರು : ಕೋವಿಡ್ ಸೋಂಕನ್ನು ನಿಯಂತ್ರಿಸಲು ಈ ಹಿಂದೆ ಜೂನ್ 7ರವರೆಗೆ ಜಾರಿಗೊಳಿಸಲಾಗಿತ್ತು. ಇದೀಗ ಇನ್ನಷ್ಟು ನಿಯಂತ್ರಣಕ್ಕಾಗಿ ತಜ್ಞರ ಸಲಹೆಯನ್ನು ಪರಿಗಣಿಸಿ ಜೂನ್ 14ರ ತನಕ ಒಂದು ವಾರ ಕಾಲ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದು, ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು ವಿಶೇಷ ಪ್ಯಾಕೇಜ್ ಗಳನ್ನು ಘೋಷಿಸಿದ್ದಾರೆ.

- Advertisement -

500 ಕೋಟಿ ವಿಶೇಷ ಎರಡನೇ ಪ್ಯಾಕೇಜ್ ಘೋಷಣೆ ಮಾಡಲಾಗಿದ್ದು, ಪವರ್ ಲೂಮ್ ನೇಕಾರರಿಗೆ ಮೂರು ಸಾವಿರ, ಚಲನ ಚಿತ್ರ, ದೂರ ದರ್ಶನ ಸಿಬ್ಬಂದಿಗಳಿಗೆ 3 ಸಾವಿರ,  ಮೀನುಗಾರರಿಗೆ ಉಳಿತಾಯ ಮತ್ತು ಪರಿಹಾರ ಯೋಜನೆಯಡಿ ನೊಂದಾಯಿಸಿದಂತ ಮೀನುಗಾರರಿಗೆ ತಲಾ 3 ಸಾವಿರ, ಇನ್ ಲ್ಯಾಂಡ್ ದೋಣಿ ಮಾಲೀಕರಿಗೆ ಮೂರು ಸಾವಿರ, ಮುಜುರಾಯಿ ದೇವಸ್ಥಾನದ ಅರ್ಚಕರು, ಸಿಬ್ಬಂದಿಗಳಿಗೆ ಸಿ ವರ್ಗದ ದೇವಸ್ಥಾನದಲ್ಲಿ ಕೆಲಸ ಮಾಡುವಂತ ತಲಾ ಮೂರು ಸಾವಿರ ನೀಡಲು ನಿರ್ಧಾರ ಮಾಡಲಾಗಿದೆ. ಮಸೀದಿಯಲ್ಲಿನ ಇಮಾಮರಿಗೆ ತಲಾ ಮೂರು ಸಾವಿರ ಕೊಡಲು ನಿರ್ಧಾರ ಮಾಡಲಾಗಿದೆ.

ಆಶಾ ಕಾರ್ಯಕರ್ತರಿಗೆ ಮೂರು ಸಾವಿರ ನೀಡಲಾಗುತ್ತದೆ. ಇದರಿಂದ 42574 ಕಾರ್ಯಕರ್ತೆಯರಿಗೆ ಸಹಾಯ ಆಗಲಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ,ಎಲ್ಲಾ ಶಾಲೆಗಳು ಮುಚ್ಚಿದ್ದರೂ ಆಹಾರ ಧಾನ್ಯ ವಿತರಣೆ ಮಾಡಲಾಗುತ್ತಿದೆ. ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ 5 ಸಾವಿರ ಪರಿಹಾರ. ನ್ಯಾಯವಾದಿಗಳ ಕಲ್ಯಾಣ ನಿಧಿಗೆ 5 ಕೋಟಿ ನೀಡಲಾಗುತ್ತಿದೆ.

- Advertisement -

ಕೈಗಾರಿಕೆಗಳಿಗೆ ಜೂನ್ 2021 ನಿಗದಿತ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಎಂಎಸ್‌ಎಂಇ ಕೈಗಾರಿಕೆ ಹೊರತುಪಡಿಸಿ, ಇತರೆ ಕೈಗಾರಿಕೆಗಳ ಗ್ರಾಹಕರಿಗೆ ಮೇ, ಜೂನ್ ತಿಂಗಳ ವಿದ್ಯುತ್ ಶುಲ್ಕ ಪಾವತಿಯಿಂದ ಜುಲೈ 30ರವರೆಗೆ ವಿನಾಯ್ತಿ ನೀಡಲಾಗಿದೆ ಎಂದು ಯಡಿಯೂರಪ್ಪ ಘೋಷಿಸಿದ್ದಾರೆ.

Join Whatsapp