ದ.ಕ ಜಿಲ್ಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆಗೆ ಜಿಲ್ಲಾಡಳಿತ ಚಿಂತನೆ?

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರದಿಂದ ಹಂತಹಂತವಾಗಿ ಲಾಕ್ ಡೌನ್ ಸಡಿಲಿಕೆಗೆ ಜಿಲ್ಲಾಡಳಿತ ಚಿಂತನೆ ನಡೆಸಿದೆ.

- Advertisement -

ರಾಜ್ಯ ಸರ್ಕಾರ ಅನುಮತಿ ಕೊಟ್ಟರೆ ಜಿಲ್ಲೆಯಲ್ಲಿ ಸೋಮವಾರದಿಂದ ಹಂತ ಹಂತವಾಗಿ ಲಾಕ್ ಡೌನ್ ಸಡಿಲಿಕೆ ಮಾಡಿ ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಗಮನಕ್ಕೆ ತರಲು ಜಿಲ್ಲಾಡಳಿತ ನಿರ್ಧರಿಸಿದೆ.

ಅಗತ್ಯ ವಸ್ತುಗಳ ಜೊತೆಗೆ ಇತರೆ ಅಂಗಡಿ, ಶಾಪ್ ತೆರೆಯಲು ಅನುಮತಿ ನೀಡುವ ಸಾಧ್ಯತೆಯಿದ್ದು, ವಾರದಲ್ಲಿ ಮೂರು ದಿನ ಅಗತ್ಯ ವಸ್ತು, ಉಳಿದ ನಾಲ್ಕು ದಿನ ಇತರೆ ಅಂಗಡಿ ತೆರೆಯಲು ಅನುಮತಿ ಸಿಗುವ ಸಾಧ್ಯತೆ ಇದೆ.

- Advertisement -

ಒಂದು ದಿನ ಅಗತ್ಯ ವಸ್ತುವಿಗಷ್ಟೇ ಅನುಮತಿಸಿ ಇನ್ನೊಂದು ದಿನ ಇತರೆ ಶಾಪ್ ಗಳಿಗೆ ಅನುಮತಿ ನೀಡಲಿದ್ದು, ಮಧ್ಯಾಹ್ನದವರೆಗಷ್ಟೇ ವ್ಯವಹಾರ ನಡೆಸಲು ಅನುಮತಿ ನೀಡುವ ಸಾಧ್ಯತೆ ಇದೆ.

ಇನ್ನು ಸಭೆ, ಸಮಾರಂಭ, ಥಿಯೇಟರ್ ಮತ್ತು ಮಾಲ್ ಗಳಿಗೆ ಸದ್ಯ ನಿಷೇಧ ಹೇರಲಾಗುವುದು. ಅದೇ ರೀತಿ ಬಸ್ ಸಂಚಾರಕ್ಕೆ ಅನುಮತಿ ಕೊಡುವುದು ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಟ್ಟದ್ದು ಎಂದು ಜಿಲ್ಲಾಡಳಿತ ತಿಳಿಸಿದೆ.

Join Whatsapp