ರಾಜ್ಯದಲ್ಲಿ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ವಿಸ್ತರಣೆ: ಮುಖ್ಯಮಂತ್ರಿ ಘೋಷಣೆ

Prasthutha|

ಬೆಂಗಳೂರು: ರಾಜ್ಯದಲ್ಲಿ ಮತ್ತೆ 14 ದಿನಗಳ ಲಾಕ್ಡೌನ್ ವಿಸ್ತರಿಸುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಆ ಪ್ರಕಾರ ಜೂನ್ 7 ರ ಬೆಳಿಗ್ಗೆ 6 ಗಂಟೆ ತನಕ ಲಾಕ್ಡೌನ್ ಜಾರಿಯಲ್ಲಿರುವುದಾಗಿ ತಿಳಿಸಿದ್ದಾರೆ. ಈಗ ಜಾರಿಯಲ್ಲಿರುವ ಮಾರ್ಗಸೂಚಿ ಅನ್ವಯವೇ ಲಾಕ್ಡೌನ್ ಮುಂದುವರೆಸುವುದಾಗಿ ಹೇಳಿರುವ ಸಿಎಂ, ನಿಯಮ ಉಲ್ಲಂಘಿಸಿದ್ದಲ್ಲಿ ಕಠಿಣ ಕ್ರಮ ಎಚ್ಚರಿಕೆಯನ್ನೂ ನೀಡಿದ್ದಾರೆ. 

- Advertisement -

ಅದರಂತೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗಾಗಿ ಅವಕಾಶ ನೀಡಲಾಗಿದೆ. ಸಮಯ ಮಿತಿಯನ್ನ ಮೀರಿದ್ರೆ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ. ಕೋವಿಡ್ ಎರಡನೇ ಅಲೆಯ ಮೊದಲ ಲಾಕ್ಡೌನ್ ಇದೇ ಮೇ 24ರಂದು ಅಂತ್ಯಗೊಳ್ಳಲಿತ್ತು. ಇದೀಗ ಮತ್ತೆ 14 ದಿನಗಳ ಕಾಲ ಲಾಕ್ಡೌನ್ ಘೋಷಿಸಿಲಾಗಿದೆ. 

ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ, ತಜ್ಙರ ಸಲಹೆಯಂತೆ ಲಾಕ್ಡೌನ್ ವಿಸ್ತರಿಸಿದ್ದಾಗಿ ಸಿಎಂ ಇದೇ ಸಂದರ್ಭ ತಿಳಿಸಿದ್ದಾರೆ.

Join Whatsapp