ಲೋಕ್ ಅದಾಲತ್: ದ.ಕ. ಜಿಲ್ಲೆಯಲ್ಲಿ 30,729 ಪ್ರಕರಣಗಳು ಇತ್ಯರ್ಥ;18,92,57,121 ಕೋಟಿ ರೂ.ಪರಿಹಾರ ವಸೂಲು

Prasthutha|

ಮಂಗಳೂರು: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ‘ರಾಷ್ಟ್ರೀಯ ಲೋಕ್ ಅದಾಲತ್’ ಕಾರ್ಯಕ್ರಮವನ್ನು ಆ.13ರ ಶನಿವಾರ ದಕ್ಷಿಣ ಕನ್ನಡ ಜಿಲ್ಲಾ ಹಾಗೂ ತಾಲೂಕುಗಳ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

- Advertisement -

  ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 47 ಬೈಠಕ್‍ ಗಳು ನಡೆದವು. ಅದಾಲತ್‍ ನಲ್ಲಿ ಒಟ್ಟು 35,649 ಪ್ರಕರಣಗಳು ಪರಿಗಣಿಸಲಾಗಿತ್ತು; ಅದರಲ್ಲಿ 30,729 ಪ್ರಕರಣಗಳು ರಾಜಿಯಾಗಿದ್ದು, ರಾಜಿ ಮೊತ್ತ ಒಟ್ಟು 18,92,57,121 ಪರಿಹಾರ ಹಣವನ್ನು ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹಾಗೂ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ರವೀಂದ್ರ ಎಂ ಜೋಷಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶೋಭಾ ಬಿ.ಜಿ. ತಿಳಿಸಿದರು.

ಈ ರಾಷ್ಟ್ರೀಯ ಲೋಕ್ ಅದಾಲತ್‍ ನಲ್ಲಿ ಸಾರ್ವಜನಿಕರ ವ್ಯಾಜ್ಯಪೂರ್ವ, ರಾಜಿಯಾಗಬಹುದಾದ ಅಪರಾಧಿತ ಪ್ರಕರಣಗಳು, ಚೆಕ್ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಸಿವಿಲ್ ಪ್ರಕರಣಗಳು, ಆಸ್ತಿ ವಿಭಾಗದ ಪ್ರಕರಣಗಳು ಹಾಗೂ ಇತರೆ ರಾಜಿಯಾಗಬಹುದಾದ ಪ್ರಕರಣಗಳನ್ನು ಇತ್ಯರ್ಥಪಡಿಸಲಾಯಿತು.

- Advertisement -

ಈ ಅದಾಲತ್‍ನಲ್ಲಿ ಸಾರ್ವಜನಿಕರು ತಮ್ಮ ವ್ಯಾಜ್ಯಗಳು/ಪ್ರಕರಣಗಳು ಯಾವುದೇ ನ್ಯಾಯಾಲಯದ ಶುಲ್ಕವಿಲ್ಲದೇ ಇತ್ಯರ್ಥಗೊಳಿಸಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರುಗಳು ಇದ್ದರು.

Join Whatsapp