ಲೋಕಸಭೆ ಚುನಾವಣೆ: ಟಿಎಂಸಿ–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

Prasthutha|

ಕೋಲ್ಕತ್ತ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದಲ್ಲಿ ಪಶ್ವಿಮ ಬಂಗಾಳ ಎಂಟು ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಪಶ್ಚಿಮ ಬರ್ಧಮಾನ್ ಜಿಲ್ಲೆಯ ದುರ್ಗಾಪುರದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ.

- Advertisement -


ಘರ್ಷಣೆಯ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಉಭಯ ಪಕ್ಷದ ಕಾರ್ಯಕರ್ತರು ತಳ್ಳಾಟ ನಡೆಸಿದ್ದಾರೆ. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಹತೋಟಿಗೆ ತರಲು ಯತ್ನಿಸಿದ್ದಾರೆ.


ಈ ಕುರಿತಂತೆ ಸುದ್ದಿಸಂಸ್ಥೆ ಎಎನ್ ಐ ಜೊತೆ ಮಾತನಾಡಿದ ಟಿಎಂಸಿ ನಾಯಕ ರಾಮ್ ಪ್ರಸಾದ್ ಹಲ್ದಾರೆ, ‘ಬೆಳಗ್ಗೆ 6 ಗಂಟೆಯಿಂದಲೇ ಕೇಂದ್ರ ಪಡೆಗಳೊಂದಿಗೆ ಇಲ್ಲಿಗೆ ಬಂದ ಬಿಜೆಪಿಗರು ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾರೆ. ಇದರ ವಿರುದ್ಧ ನಾವು ಪ್ರತಿಭಟನೆ ಮಾಡಿದ್ದೇವು. ಮತದಾರರೂ ಪ್ರತಿಭಟನೆ ನಡೆಸಿದ್ದಾರೆ. ಹೊರಗಿನಿಂದ ಪೋಲಿಂಗ್ ಏಜೆಂಟರನ್ನು ಕರೆತರಲು ಯತ್ನಿಸುತ್ತಿದ್ದಾರೆ’ ಎಂದು ಆರೋಪಿಸಿದರು.

- Advertisement -



Join Whatsapp