ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು

Prasthutha|

ಹಾವೇರಿ: ಲಂಚ ಪಡೆಯುತ್ತಿದ್ದ ವೇಳೆ ಪಿಎಸ್ ಐ ಮತ್ತು ವಾಹನ ಚಾಲಕ ಇಬ್ಬರೂ ಲೋಕಾಯುಕ್ತ ಬಲೆ ಬಿದ್ದಿದ್ದಾರೆ.

- Advertisement -


ರಾಣೆಬೆನ್ನೂರು ಶಹರ ಠಾಣೆಯ ಪಿಎಸ್ ಐ ಸುನೀಲ ತೇಲಿ ಹಾಗೂ ವಾಹನ ಚಾಲಕ ಸಚಿನ್ ಆರೋಪಿಗಳಾಗಿದ್ದಾರೆ.


ರಾಣೇಬೆನ್ನೂರು ನಗರ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 50 ಸಾವಿರ ರೂ. ಬೇಡಿಕೆಯಿಟ್ಟಿದ್ದರು. ಫೀರೋಜಾ ಎಂಬ ವ್ಯಕ್ತಿ 40 ಸಾವಿರ ರೂ. ಹಣವನ್ನು ಟೀ ಸ್ಟಾಲ್ನಲ್ಲಿ ಕೊಟ್ಟು ಹೋಗಿದ್ದರು. ಈ ಹಣವನ್ನು ಚಾಲಕ ತೆಗೆದುಕೊಂಡು ಪಿಎಸ್ ಐಗೆ ಕೊಡುತ್ತಿದ್ದ ವೇಳೆ ರೇಡ್ ಹ್ಯಾಂಡ್ಆಗಿ ಸಿಕ್ಕಿ ಬಿದ್ದಿದ್ದಾರೆ.

Join Whatsapp