ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಕಿತ್ತೂರು ತಹಶೀಲ್ದಾರ

Prasthutha|

ಬೆಳಗಾವಿ: ಲಂಚ ಪಡೆಯುತ್ತಿದ್ದಾಗ ಕಿತ್ತೂರು ತಹಶೀಲ್ದಾರ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ

- Advertisement -

ತಂದೆ ಹೆಸರಿನಲ್ಲಿದ್ದ ಜಮೀನನ್ನು ಮಗನ ಹೆಸರಿಗೆ ಬದಲಾವಣೆ ಮಾಡಲು ಲಂಚ ಪಡೆಯುತ್ತಿದ್ದ ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೇರಿ ಇಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚನ್ನಮ್ಮನ ಕಿತ್ತೂರು ತಹಶೀಲ್ದಾರ ಸೋಮಲಿಂಗಪ್ಪ ಹಾಲಗಿ ಹಾಗೂ ಕಚೇರಿ ಭೂ ಸುಧಾರಣಾ ವಿಷಯಗಳ ನಿರ್ವಾಹಕ ಪ್ರಸನ್ನ ಜಿ. ಎಂಬವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿದ್ದಾರೆ.

- Advertisement -

ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ ಪತ್ರಿಕೆಯಲ್ಲಿ ಖಾತಾ ಬದಲಾವಣೆ ಮಾಡಲು 5 ಲಕ್ಷ ರೂ. ಲಂಚ ಕಿತ್ತೂರು ತಹಶೀಲ್ದಾರ ಸೋಮಲಿಂಗ ಹಾಲಗಿ ಬೇಡಿಕೆ ಇಟ್ಟಿರುವುದು ಬೆಳಕಿಗೆ ಬಂದಿದೆ.  

Join Whatsapp