ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ !

Prasthutha|

ಬೆಂಗಳೂರು: ಚಲಿಸುವ ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.

- Advertisement -

ಈಸ್ಟ್ ಪಾಯಿಂಟ್ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದ ಚೈತನ್ಯ (19) ಮತ್ತು ಸಿರೀಶ್ (20) ಆತ್ಮಹತ್ಯೆ ಮಾಡಿಕೊಂಡವರು.

ಒಟ್ಟಿಗೆ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಮನೆಯವರ ವಿರೋಧದ ಹಿನ್ನಲೆಯಲ್ಲಿ ರೈಲಿಗೆ ತಲೆಕೊಟ್ಟು  ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.

- Advertisement -

ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp