ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ವಿಜಯ: ರಾಹುಲ್ ಗಾಂಧಿ

Prasthutha|

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ, ಹೃದಯದಿಂದ ಹೋರಾಡಿದ್ದೇವೆ ಎಂದಿದ್ದಾರೆ.

- Advertisement -


ದ್ವೇಷದ ಮುಂದೆ ಪ್ರೀತಿ ಗೆಲ್ಲುತ್ತದೆ, ಗೆದ್ದಿದೆ. ಈ ದೇಶದವರಿಗೆ ಗೊತ್ತು ಪ್ರೀತಿ ಇಷ್ಟ . ನಾವು ಬಡವರ ಜತೆ ನಿಂತಿದ್ದೆವು. ಇದು ಎಲ್ಲರ ಗೆಲುವು. ಇದು ಕರ್ನಾಟಕದ ಜನರ ಗೆಲುವು. ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ನಾವು ಆ ಭರವಸೆಗಳನ್ನು ವಿಧಾನಸಭೆ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.



Join Whatsapp