Home ಟಾಪ್ ಸುದ್ದಿಗಳು ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ವಿಜಯ: ರಾಹುಲ್ ಗಾಂಧಿ

ದ್ವೇಷದ ವಿರುದ್ಧ ಪ್ರೀತಿಗೆ ಸಿಕ್ಕ ವಿಜಯ: ರಾಹುಲ್ ಗಾಂಧಿ

ನವದೆಹಲಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿಯಾಗಿ ಮುನ್ನಡೆ ಸಾಧಿಸಿ, ಹಲವು ಕ್ಷೇತ್ರಗಳಲ್ಲಿ ಗೆಲುವಿನ ನಗೆ ಬೀರುತ್ತಿದ್ದಂತೆ ದೆಹಲಿಯಲ್ಲಿ ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನಾನು ಮೊದಲಿಗೆ ಕರ್ನಾಟಕದ ಜನತೆಗೆ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ ನಾವು ಕರ್ನಾಟಕದಲ್ಲಿ ದ್ವೇಷದಿಂದ ಹೋರಾಡಿಲ್ಲ, ಹೃದಯದಿಂದ ಹೋರಾಡಿದ್ದೇವೆ ಎಂದಿದ್ದಾರೆ.


ದ್ವೇಷದ ಮುಂದೆ ಪ್ರೀತಿ ಗೆಲ್ಲುತ್ತದೆ, ಗೆದ್ದಿದೆ. ಈ ದೇಶದವರಿಗೆ ಗೊತ್ತು ಪ್ರೀತಿ ಇಷ್ಟ . ನಾವು ಬಡವರ ಜತೆ ನಿಂತಿದ್ದೆವು. ಇದು ಎಲ್ಲರ ಗೆಲುವು. ಇದು ಕರ್ನಾಟಕದ ಜನರ ಗೆಲುವು. ನಾವು 5 ಗ್ಯಾರಂಟಿ ಭರವಸೆಗಳನ್ನು ನೀಡಿದ್ದೆವು. ನಾವು ಆ ಭರವಸೆಗಳನ್ನು ವಿಧಾನಸಭೆ ಕಲಾಪದ ಮೊದಲ ದಿನವೇ ಜಾರಿಗೆ ತರುತ್ತೇವೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

Join Whatsapp
Exit mobile version