ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ

Prasthutha|

- Advertisement -

ಮೈಸೂರು: ಪ್ರೀತಿಸಿದ ಹುಡುಗ ಕೈಕೊಟ್ಟಿದ್ದಕ್ಕೆ ಯುವತಿ ಡೆತ್​ ನೋಟ್​​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಗೌಡನಹಳ್ಳಿಯಲ್ಲಿ ನಡೆದಿದೆ.

ನಿಸರ್ಗಾ ಮೃತ ಯುವತಿ. ನಿಸರ್ಗಾ ಕೆ.ಆರ್ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ ಓದುತ್ತಿದ್ದಳು. ನಿಸರ್ಗಾಳಿಗೆ ಸುಹಾಸ್ ರೆಡ್ಡಿ ಎಂಬ ಯುವಕನ ಪರಿಚಯವಾಗುತ್ತದೆ. ಪರಿಚಯ ಸ್ನೇಹವಾಗಿ, ಸ್ನೇಹ ಪ್ರೀತಿಗೆ ತಿರುಗುತ್ತಿದೆ. ಆದರೆ ಇತ್ತೀಚಿಗೆ ಕೆಲದಿನಗಳಿಂದ ಪ್ರಿಯತಮ ಸುಹಾಸ್ ವರ್ತನೆಯಲ್ಲಿ ಬದಲಾವಣೆ ಕಂಡಿದ್ದು, ಆತ ಮತ್ತೊಬ್ಬ ಯುವತಿಯೊಂದಿಗೆ ಸ್ನೇಹ ಬೆಳಸಿದ್ದನು.

- Advertisement -

ಇದರಿಂದ ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ನಿಸರ್ಗಾ ಡೆತ್ ನೋಟ್ ಬರೆದು ಇಲಿ ಪಾಷಾಣ ತೆಗೆದುಕೊಂಡಿದ್ದಾಳೆ. ಕೂಡಲೆ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಿಸದೆ ನಿಸರ್ಗಾ ಸಾವನ್ನಪ್ಪಿದ್ದಾಳೆ. ಇನ್ನು ನಿಸರ್ಗಾ ಆತ್ಮಹತ್ಯೆಗೆ ಶರಣಾಗುತ್ತಿದ್ದಂತೆ ಆರೋಪಿ ಸುಹಾಸ್​​ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ನಡೆಸಿದ್ದಾರೆ.

Join Whatsapp