ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

Prasthutha|

ರಾಯಚೂರು: ಪ್ರೇಮಿಗಳಿಬ್ಬರು ಒಂದೇ ಮರಕ್ಕೆ ನೇಣು  ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆ ಸಿಂಧನೂರು ತಾಲ್ಲೂಕಿನ ಆರ್ ಎಚ್ ಕ್ಯಾಂಪ್-3 ನಲ್ಲಿ ನಡೆದಿದೆ

- Advertisement -

ಲವ್ ಸರ್ಕಾರ್(24) ಕರೀನಾ(19) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ.

ಲವ್ ಸರ್ಕಾರ್ ಇಬ್ಬರು ಯುವತಿಯರನ್ನು ಪ್ರೀತಿಸಿದ್ದನು.  ಹೀಗಾಗಿ ಕರೀನಾಗೆ ಕೈಕೊಟ್ಟು ಬೇರೆಯೊಬ್ಬಳ ಜೊತೆಗೆ ಮದುವೆ ಆಗಿದ್ದ‌ನು. ಇದರಿಂದ ಕರೀನಾ ತೀವ್ರವಾಗಿ ಮನನೊಂದಿದ್ದಳು. ಇತ್ತ ಕರೀನಾಳನ್ನೂ ಬಿಟ್ಟು ಇರಲು ಆಗದೇ ಲವ್ ಸರ್ಕಾರ್, ಕರೀನಾ ಜತೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

ಈ ಸಂಬಂಧ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp