Home ಕರಾವಳಿ ದ.ಕ. ಜಿಲ್ಲೆಯಲ್ಲಿ ತಗ್ಗಿದ ಮಳೆ

ದ.ಕ. ಜಿಲ್ಲೆಯಲ್ಲಿ ತಗ್ಗಿದ ಮಳೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ರವಿವಾರ ಸಾಧಾರಣ ಮಳೆಯಾಗಿದೆ. ಇಂದು ದಕ್ಷಿಣ ಕನ್ನಡದಲ್ಲಿ ಕೆಲ ಕಾಲ ಬಿಸಿಲಿನ ವಾತಾವರಣ ಕಂಡುಬಂದರೆ ಉಡುಪಿಯಲ್ಲಿ ಹಲವೆಡೆ ಬಿಟ್ಟು ಬಿಟ್ಟು ಮಳೆಯಾಗಿದೆ.

ಇನ್ನು 10ರಿಂದ 13ರ ತನಕ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆಯಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಬೆಳ್ತಂಗಡಿ, ಉಜಿರೆ , ವೇಣೂರು ಮಂಡ್ತಾರು , ಪುಂಜಾಲಕಟ್ಟೆ, ಉಪ್ಪಿನಂಗಡಿ ಮೂಡುಬಿದಿರೆ ಸಹಿತ ಸಾಧಾರಣ ಮಳೆಯಾಗಿದೆ. ಕಡಬದಲ್ಲಿ ಎರಡು ಬಾರಿ ಉತ್ತಮ ಮಳೆಯಾಗಿದೆ. ಉಳಿದಂತೆ ಎಲ್ಲಾ ಕಡೆ ಮಳೆ ಕಡಿಮೆಯಾಗಿತ್ತು.

Join Whatsapp
Exit mobile version