ಮತದಾರರಿಗೆ ಆಮಿಷ: ಝಮೀರ್ ವಿರುದ್ಧದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Prasthutha|

ಬೆಂಗಳೂರು: ಚಾಮರಾಜಪೇಟೆಯ ಶಾಸಕ ಝಮೀರ್ ಆಹಮದ್ ಖಾನ್ ವಿರುದ್ಧ ಸಲ್ಲಿಕೆಯಾಗಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

- Advertisement -

ತನ್ನ ಪಕ್ಷ ಅಧಿಕಾರಕ್ಕೆ ಬಂದರೆ ಕೆಲ ನೀತಿ ಜಾರಿಗೊಳಿಸುವುದಾಗಿ ಭರವಸೆ ನೀಡಿರುವುದು ಪ್ರಜಾಪ್ರತಿನಿಧಿ ಕಾಯ್ದೆಯಡಿ ಮತದಾರರಿಗೆ ಆಮಿಷವೊಡ್ಡಿದಂತಾಗುವುದಿಲ್ಲ ಎಂದು ಹೈಕೋರ್ಟ್ ಹೇಳಿದೆ.

ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಜಮೀರ್ ಆಹಮದ್ ಖಾನ್ ಮತದಾರರನ್ನು ಓಲೈಸಿ ಮತ ಕೋರಿದ್ದಾರೆ. ಆ ಮೂಲಕ ಮತದಾರರಿಗೆ ಆಮಿಷವೊಡ್ಡಿದ್ದಾರೆ. ಹೀಗಾಗಿ ಅದು ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಮತದಾರರನ್ನು ಭ್ರಷ್ಟರನ್ನಾಗಿ ಮಾಡಿದಂತಾಗಿದೆ. ಆದ್ದರಿಂದ ಝಮೀರ್ ಆಹಮದ್ ಆಯ್ಕೆಯನ್ನು ಅನೂರ್ಜಿತಗೊಳಿಸಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆಯಾಗಿತ್ತು.

- Advertisement -

ಸಚಿವರು ವೈಯಕ್ತಿಕವಾಗಿ ಮತದಾರರಿಗೆ ಆಮಿಷವೊಡ್ಡಿದ್ದಾರೆ ಎಂಬುದಕ್ಕೆ ಸಾಕ್ಷಾೃಧಾರಗಳಿಲ್ಲ. ಪ್ರಣಾಳಿಕೆಯ ಅಂಶಗಳನ್ನು ಉಲ್ಲೇಖಿಸಿದ್ದಾರೆ. ಅದನ್ನು ಪರಿಗಣಿಸಿ ಪ್ರತಿವಾದಿ ಆಯ್ಕೆ ಅನೂರ್ಜಿತಗೊಳಿಸಲಾಗದು ಎಂದು ನ್ಯಾಯಾಲಯ ಹೇಳಿದೆ.

Join Whatsapp