Home ಕರಾವಳಿ ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಸಿಗರೇಟ್ ಹಿಡಿದ ಫೋಟೋ ವೈರಲ್

ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಸಿಗರೇಟ್ ಹಿಡಿದ ಫೋಟೋ ವೈರಲ್

ಬೆಂಗಳೂರು: ಕೊಲೆ ಆರೋಪದಲ್ಲಿ ನಟ ದರ್ಶನ್​ ಜೈಲು ಸೇರಿದ್ದು, ಅಲ್ಲಿ ಅವರಿಗೆ ರಾಜಾತಿಥ್ಯ ಸಿಗುತ್ತಿದೆಯಾ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.

ದರ್ಶನ್​ ಅವರ ಒಂದು ಫೋಟೋ ವೈರಲ್​ ಆಗಿದ್ದು, ಅದರಲ್ಲಿ ಅವರು ಸಿಗರೇಟು ಸೇದುತ್ತಾ, ಕಾಫಿ ಕುಡಿಯುತ್ತಿರುವ ದೃಶ್ಯ ಸೆರೆಯಾಗಿದೆ.

ವೈರಲ್​ ಆಗಿರುವ ಫೋಟೋದಿಂದ ಅನೇಕ ಅನುಮಾನಗಳು ಮೂಡಲು ಆರಂಭಿಸಿವೆ. ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿಸಿದ ಆರೋಪ ದರ್ಶನ್​ ಮೇಲಿದೆ.

ದರ್ಶನ್​ ಅವರು ಸ್ಪೆಷಲ್​ ಬ್ಯಾರಕ್​ನಿಂದ ಹೊರಬಂದು, ಮೂವರ ಜೊತೆ ಕುಳಿತು ಹರಟೆ ಹೊಡೆಯುತ್ತಿದ್ದಾರೆ. ಕಾಫಿ ಮಗ್​ ಹಿಡಿದುಕೊಂಡು ಅವರು ಕುಳಿತಿದ್ದಾರೆ. ಕೈಯಲ್ಲಿ ಸಿಗರೇಟ್​ ಕೂಡ ಇದೆ. ಈ ಫೋಟೋ ವೈರಲ್​ ಆಗಿದೆ.

ಈಗಾಗಲೇ ಅನೇಕರು ಜೈಲಿಗೆ ಭೇಟಿ ನೀಡಿ ದರ್ಶನ್​ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಪೊಲೀಸರ ತನಿಖೆಯಲ್ಲಿ ಹೇಳಿಕೆ ನೀಡಿದ ಬಳಿಕ ನಟ ಚಿಕ್ಕಣ್ಣ ಕೂಡ ಜೈಲಿಗೆ ತೆರಳಿ ದರ್ಶನ್​ ಅವರನ್ನು ಮಾತನಾಡಿಸಿದ್ದರು. ಹಾಗಾಗಿ ಅವರಿಗೆ ಪೊಲೀಸರು ಮತ್ತೆ ನೋಟೀಸ್​ ನೀಡುವ ಸಾಧ್ಯತೆ ಇದೆ. ಕೇಸ್​ ತನಿಖೆ ಆರಂಭ ಆದಾಗ ದರ್ಶನ್​ ಅವರು ಎ2 ಆಗಿದ್ದರು. ಆದರೆ ಚಾರ್ಚ್​ಶೀಟ್​ ಸಲ್ಲಿಸುವ ಹಂತದಲ್ಲಿ ಅವರನ್ನು ಎ1 ಮಾಡುವ ಸಾಧ್ಯತೆ ಇದೆ ಎಂಬ ಮಾಹಿತಿ ಕೂಡ ಕೇಳಿಬಂದಿದೆ.

Join Whatsapp
Exit mobile version