ಮಂಗಳೂರಿಗೆ ಆಗಮಿಸಿದ ಎಂ.ಎಸ್. ಧೋನಿ

Prasthutha|

ಮಂಗಳೂರು: ಟೀಂ ಇಂಡಿಯಾ ಮಾಜಿ ನಾಯಕ ಎಂ.ಎಸ್. ಧೋನಿ ಶನಿವಾರ ಖಾಸಗಿ ಕಾರ್ಯಕ್ರಮದ ನಿಮಿತ್ತ ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

- Advertisement -


ತಮ್ಮ ಸ್ನೇಹಿತ ಕಾಸರಗೋಡಿನ ಡಾ. ಶಾಜೀರ್ ಗಫಾರ್ ಅವರ ತಂದೆ ಪ್ರೊ ಕೆ.ಕೆ. ಅಬ್ದುಲ್ ಗಫಾರ್ ಅವರ ಜೀವನಾಧಾರಿತ ಆತ್ಮಕಥನ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗಿಯಾಗುವ ಸಲುವಾಗಿ ಧೋನಿ ಮಂಗಳೂರಿಗೆ ಬಂದಿಳಿದಿದ್ದಾರೆ.


ಧೋನಿ ಮಂಗಳೂರಿಗೆ ಆಗಮಿಸಿದ ಬಳಿಕ ಅವರನ್ನು ಶಾಸಕ ಖಾದರ್ ಸಹೋದರ ಯು.ಟಿ. ಇಫ್ತಿಕಾರ್ ಆತ್ಮೀಯವಾಗಿ ಬರಮಾಡಿಕೊಂಡರು.

- Advertisement -



Join Whatsapp