ಮಡಿಕೇರಿ | ಜಿಂಕೆ ಹತ್ಯೆ : ವ್ಯಕ್ತಿ ಬಂಧನ

Prasthutha|

ಮಡಿಕೇರಿ: ಜಿಂಕೆಯೊಂದನ್ನು ಹತ್ಯೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ  ವ್ಯಕ್ತಿಯನ್ನು ಮಡಿಕೇರಿ ಪೊಲೀಸ್ ಅರಣ್ಯ ಸಂಚಾರಿದಳದ ಸಿಬ್ಬಂದಿಗಳು ಬಂಧಿಸಿದ್ದಾರೆ.

- Advertisement -

ಸೋಮವಾರಪೇಟೆ ತಾಲೂಕಿನ ಮಾವಿನಹಳ್ಳ ಹಾಡಿಯ ಕುಮಾರ ಬಂಧಿತ  ಆರೋಪಿ ಎಮದು ಗುರುತಿಸಲಾಗಿದೆ.

ಆನೆಕಾಡು ಮೀಸಲು ಅರಣ್ಯದಲ್ಲಿ ಉರುಳು ಹಾಕಿ ಜಿಂಕೆಯನ್ನು ಹತ್ಯೆ ಮಾಡಿ, ಮಾಂಸವನ್ನು ಭಕ್ಷಿಸಲಾಗಿತ್ತು. ಈ ಬಗ್ಗೆ ದೊರೆತ ಸುಳಿವಿನ ಮೇಲೆ ದಾಳಿ ನಡೆಸಿದ ಪೊಲೀಸರು ಜಿಂಕೆಯ ಚರ್ಮ ಸಹಿತವಾಗಿ ಆರೋಪಿ ಕುಮಾರನನ್ನು ಬಂಧಿಸಿದ್ದಾರೆ.
ಈತನೊಂದಿಗೆ ಸಹಕರಿಸಿರುವ ಮತ್ತೋರ್ವ ಆರೋಪಿ ಪರಾರಿಯಾಗಿದ್ದು, ಈತನ ಬಂಧನಕ್ಕೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Join Whatsapp